ಮಸೀದಿಯ ಮಿನಾರ್‌ಗೆ ಕೇಸರಿ ಧ್ವಜ ಕಟ್ಟಿದರು !

ಮಸೀದಿಯೊಂದರ ಮೇಲೆ ಕಿಡಿಗೇಡಿಗಳು ರಾತ್ರೋ ರಾತ್ರಿ ಕೇಸರಿ ಬಣ್ಣದ ಧ್ವಜ ಕಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅರಬಾವಿ ಗ್ರಾಮದ ನಡೆದಿದೆ.

ಅರಬಾವಿ ಗ್ರಾಮದ ಸತ್ತಿಗೇರಿ ಮಡ್ಡಿ ತೋಟದ ಮಸೀದಿ ಮೇಲೆ ಕಿಡಿಗೇಡಿಗಳು ಕೇಸರಿ ಧ್ವಜ ಕಟ್ಟಿದ್ದಾರೆ.

ಸ್ಥಳೀಯ ಮುಸ್ಲಿಮರು ಬುಧವಾರ ಬೆಳಗ್ಗೆ ಪ್ರಾರ್ಥನೆಗೆಂದು ಮಸೀದಿಗೆ ತೆರಳಿದಾಗ ಕೇಸರಿ ಧ್ವಜ ಕಟ್ಟಿರುವುದು ಗಮನಕ್ಕೆ ಬಂದಿದೆ.

”ಮಂಗಳವಾರ ತಡರಾತ್ರಿ ಕಿಡಿಗೇಡಿಗಳು ಯಾರೋ ಮಸೀದಿಯ ಮಿನಾರ್‌ಗೆ ಕೇಸರಿ ಧ್ವಜ ಕಟ್ಟಿದ್ದಾರೆ. ಬೆಳಗ್ಗೆ ಈ ವಿಚಾರ ನಮ್ಮ ಗಮನಕ್ಕೆ ಬಂದಿದೆ. ಬಳಿಕ ಸ್ಥಳೀಯ ಹಿಂದೂ ಹಾಗೂ ಮುಸ್ಲಿಮ್ ಮುಖಂಡರು ಸೇರಿ ಧ್ವಜವನ್ನು ತೆರವುಗೊಳಿಸಿದ್ದೇವೆ.

ಕಿಡಿಗೇಡಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಲಾಗುವುದು ಎಂದು ಮಸೀದಿ ಆಡಳಿತ ಸಮಿತಿ ಪದಾಧಿಕಾರಿಯೊಬ್ಬರು ತಿಳಿಸಿದರು.

Leave A Reply

Your email address will not be published.