ಬೆಳ್ತಂಗಡಿ: ಉಜಿರೆ ಬಸ್ ನಿಲ್ದಾಣದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ:ಖಾಯಿಲೆಯಿಂದ ಅಸ್ವಸ್ಥಗೊಂಡು ಉಜಿರೆ ಕಾಲೇಜು ರಸ್ತೆಯಲ್ಲಿರುವ ರೋಟರಿ ಬಸ್ ನಿಲ್ದಾಣದಲ್ಲಿ ಇದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೇ ನಿನ್ನೆ ಮೃತ ಪಟ್ಟ ಘಟನೆ ನಡೆದಿದೆ.

ಮೇ 03 ರಂದು ಸುಮಾರು 55 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಯಾವುದೋ ಖಾಯಿಲೆಯಿಂದ ಅಸ್ವಸ್ಥಗೊಂಡು, ರೋಟರಿ ಬಸ್ ನಿಲ್ದಾಣದಲ್ಲಿ ಇದ್ದರು.ಇವರನ್ನು ಕಂಡ ಸಾರ್ವಜನಿಕರೊಬ್ಬರು ತಕ್ಷಣ 108 ಗೆ ಕಾಲ್ ಮಾಡಿ ಆಂಬ್ಯುಲೆನ್ ಕರೆಸಿದ್ದಾರೆ.

ಅಸ್ವಸ್ಥಗೊಂಡಿದ್ದ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದ್ರೆ ಚಿಕಿತ್ಸೆ ಫಲಿಸದೇ ವ್ಯಕ್ತಿ ಮೃತಪಟ್ಟಿದ್ದಾರೆ.

Leave A Reply

Your email address will not be published.