ಮಲ್ಪೆ : ಕೆಲಸ ಮುಗಿಸಿ ಮನೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಸಂದರ್ಭ ಹಠಾತ್ ಹೃದಯಾಘಾತ| ವ್ಯಕ್ತಿ ಸಾವು

ಮಲ್ಪೆ: ಕೆಲಸ ಮುಗಿಸಿಕೊಂಡು ಮನೆಗೆ ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಹೋಗುತ್ತಿದ್ದ ವ್ಯಕ್ತಿಯೋರ್ವ ದಿಢೀರ್ ಹೃದಯಾಘಾತಕ್ಕೊಳಗಾಗಿ ಸಾವಿಗೀಡಾದ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಬುಧವಾರ ನಡೆದಿದೆ.

ಮಲ್ಪೆ ಕಂಬಳತೋಟ ನಿವಾಸಿ ಪ್ರತಾಪ್ (32) ಮೃತ ದುರ್ದೈವಿ.

ಮುಂಜಾನೆ ಮೀನುಗಾರಿಕೆ ಕೆಲಸ ಮುಗಿಸಿಕೊಂಡು ತನ್ನ ಸೋದರಿ ಮಗ ಕಿರಣ್ ಅವರೊಂದಿಗೆ, ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರನಾಗಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಪ್ರತಾಪ್ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಮುಂಬದಿ ಸವಾರ ಕಿರಣ್ ಅವರ ಮೈಮೇಲೆ ಪ್ರತಾಪ್ ಬಿದ್ದಿದ್ದಾರೆ. ಕೂಡಲೇ ಕಲ್ಯಾಣಪುರ ಗೊರಟ್ಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಹೈಟೆಕ್ ಆಸ್ಪತ್ರೆಗೆ ಸೇರಿಸಲಾಗಿತ್ತು.

ಅಲ್ಲಿ ಪರೀಕ್ಷಿಸಿದ ವೈದ್ಯರು ಪ್ರತಾಪ್ ಸಾವನ್ನಪ್ಪಿರುವುದಾಗಿ ದೃಢೀಕರಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.