ಬಿಜೆಪಿ ಎಸ್ ಸಿ/ಎಸ್ ಟಿ ಮುಖಂಡನ ಬರ್ಬರ ಹತ್ಯೆ ಮಾಡಿದ ದುಷ್ಕರ್ಮಿಗಳು !!!

ಮಂಗಳವಾರ ಸಂಜೆ ತಮಿಳುನಾಡು ಬಿಜೆಪಿಯ ಎಸ್‌ಸಿ/ಎಸ್‌ಟಿ ಘಟಕದ ಕೇಂದ್ರ ಜಿಲ್ಲಾ ಅಧ್ಯಕ್ಷ ಬಾಲಚಂದ್ರನ್ ಅವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಚೆನ್ನೈನ ಚಿಂತಾದ್ರಿಪೇಟೆಯಲ್ಲಿ ಮೂವರು ಅಪರಿಚಿತ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

ಒಂದು ಬೈಕ್‌ನಲ್ಲಿ ಬಂದ ಮೂವರು ಅಪರಿಚಿತ ದುಷ್ಕರ್ಮಿಗಳು ಬಾಲಚಂದ್ರನ್ ಅವರನ್ನು ಕೊಲೆ ಮಾಡಿ, ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಈ ಹತ್ಯೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಮೂಲಗಳ ಪ್ರಕಾರ, ಬಾಲಚಂದ್ರನ್ ಅವರಿಗೆ ಜೀವ ಬೆದರಿಕೆಯ ಇದ್ದುದ್ದರಿಂದ ರಾಜ್ಯ ಸರ್ಕಾರದಿಂದ ವೈಯಕ್ತಿಕ ಭದ್ರತಾ ಅಧಿಕಾರಿಯ (ಪಿಎಸ್‌ಒ) ರಕ್ಷಣೆಯನ್ನು ಒದಗಿಸಲಾಗಿತ್ತು. ಟೀ ವಿರಾಮಕ್ಕೆಂದು ಪಿಎಸ್ ಒ ಹೋಗಿದ್ದಾಗ ಸಂಜೆ 6 ರಿಂದ 7 ಗಂಟೆ ಸುಮಾರಿಗೆ ಬೀದಿಯಲ್ಲಿಯೇ ಬಾಲಚಂದ್ರನ್ ಅವರ ದಾಳಿ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಬಾಲಚಂದ್ರನ್ ಅವರನ್ನು ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅವರು ಮೃತಪಟ್ಟಿದ್ದಾರೆ.

ವೈರತ್ವದ ಕಾರಣದಿಂದ ನಡೆದಿರುವ ಕೊಲೆ ಪ್ರಕರಣ ಎನಿಸುತ್ತದೆ. ಪ್ರತ್ಯಕ್ಷದರ್ಶಿಗಳು ಈ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಆರೋಪಿಗಳ ಬಂಧನಕ್ಕೆ ನಾವು ವಿಶೇಷ ತಂಡವೊಂದನ್ನು ರಚಿಸಲಾಗಿದೆಯೆಂದು ಎಂದು ಚೆನ್ನೈ ಪೊಲೀಸ್ ಆಯುಕ್ತ ಶಂಕರ್ ಜಿವಾಲ್ ತಿಳಿಸಿದ್ದಾರೆ

Leave A Reply

Your email address will not be published.