ಮಂಗಳೂರು : ಮಸೀದಿ ವರ್ಸಸ್ ದೇವಸ್ಥಾನ | ಭವಿಷ್ಯ ಹೇಳುವವರನ್ನು ಕೂಡಲೇ ಬಂಧಿಸಬೇಕು – ತಾಂಬೂಲ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್

ಬೆಂಗಳೂರು: ಮಂಗಳೂರಿನ ಮಳಲಿಮಸೀದಿ ಮತ್ತು ದೇವಸ್ಥಾನ ಹಾಗೂ ಅದಕ್ಕೆ ಸಂಬಂಧಿಸಿದಂತೆ ಇಂದು ನಡೆದ ತಾಂಬೂಲ ಪ್ರಶ್ನೆ ವಿಚಾರ ಈಗ ಭಾರಿ ಚರ್ಚೆಗೆ ಕಾರಣವಾಗಿದೆ.

ಈ ವಿಷಯ ಈಗ ಎಲ್ಲೆಡೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಭಾರೀ ಚರ್ಚೆಗೆ ಕಾರಣವಾಗಿದೆ. ಈ ವಿಚಾರಕ್ಕೆ ಡಿಕೆ ಶಿವಕುಮಾರ್ ಕೂಡ ಪ್ರತಿಕ್ರಿಯೆ ನೀಡುತ್ತಾ, ಬೆಂಗಳೂರಿನಲ್ಲಿ ಬುಧವಾರ ಈ ರೀತಿ ಹೇಳಿದರು.

“ಅವರಿಗೆ ಏನೇನು ನಂಬಿಕೆ ಇದೆಯೋ ? ಏನೇನು ಬೇಕಾದ್ರೂ ಮಾಡಿಕೊಳ್ಳಲು. ನಾವು ಮಧ್ಯಪ್ರವೇಶ ಮಾಡಲ್ಲ.ಅವರು ಈ ರಾಜ್ಯ ಸಾಯಿಸ್ತಿದ್ದಾರೆ. ಅವರ ಸ್ವಂತಕ್ಕೆ, ಮನೆಗೆ ಏನ್ ಬೇಕಾದ್ರೂ ಮಾಡಲಿ. ಸರಕಾರ ಇದೆ, ಅಲ್ಪಸಂಖ್ಯಾತ ಇಲಾಖೆ ಇದೆ, ಮುಜರಾಯಿ ಇಲಾಖೆಯೂ ಇದೆ, ಕ್ಯಾಬಿನೆಟ್ ಇದೆ, ಸರ್ಕಾರಿ ಅಧಿಕಾರಿಗಳು ಇದ್ದಾರೆ.ಆದ್ರೆ, ಖಾಸಗಿಯಾಗಿ ಹೀಗೆ ಮಾಡಬಾರದು, ಅವರ ವಿರುದ್ಧ ಕೇಸ್ ಹಾಕಬೇಕು ಎಂದು ಮಂಗಳೂರು ತಾಂಬೂಲ ಪ್ರಶ್ನೆ ವಿರುದ್ಧ ಡಿಕೆಶಿ ಕಿಡಿಕಾರಿದರು.

Leave A Reply

Your email address will not be published.