ಪುತ್ತೂರು: ಬೆಂಕಿ ತಗುಲಿ ಹೊತ್ತಿ ಉರಿದ ಅಂಗಡಿ!! ಮಾಲೀಕನಿಗೆ ಗಾಯ-ಆಸ್ಪತ್ರೆಗೆ ದಾಖಲು

ಪುತ್ತೂರು: ಅಂಗಡಿಯೊಂದಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿ ಉರಿದು ಮಾಲೀಕ ಗಾಯಗೊಂಡ ಘಟನೆಯೊಂದು ನರಿಮೊಗರಿನಲ್ಲಿ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನರಿಮೊಗರಿನ ಬಾಲಕೃಷ್ಣ ಮಡಿವಾಳ ಎಂಬವರಿಗೆ ಸೇರಿದ ಮಹಾಲಿಂಗೇಶ್ವರ ಲಾಂಡ್ರಿ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿ ಗ್ಯಾಸ್ ಗೆ ತಗುಲಿ ಅಂಗಡಿ ಸಂಪೂರ್ಣ ಬೆಂಕಿಗಾಹುತಿಯಾಗಿದೆ ಎಂದು ವರದಿಯಾಗಿದೆ.

ಘಟನೆಯಿಂದಾಗಿ ಅಪಾರ ನಷ್ಟ ಉಂಟಾಗಿದ್ದು,ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave A Reply

Your email address will not be published.