ಅನ್ಯಧರ್ಮಿಯನ ವಂಚನೆಯ ಮೋಹಕ್ಕೆ ಕೊನೆ ಯಾವಾಗ!! ಹೆಣ್ಣುಹೆತ್ತವರ ನಿರ್ಲಕ್ಷ್ಯಕ್ಕೆ ಇನ್ನೊಂದು ಬಲಿ ಪಡೆಯಿತು ಲವ್ ಜಿಹಾದ್!!

ಅನ್ಯ ಧರ್ಮದ ಯುವಕನೊಂದಿಗೆ ಪ್ರೀತಿಯ ಬಲೆಯಲ್ಲಿ ಬಿದ್ದು ಮದುವೆಯಾಗಿದ್ದ 21 ವರ್ಷದ ಯುವತಿಯೊಬ್ಬಳು ಈಗ ಭೀಕರವಾಗಿ ಸತ್ತಿದ್ದಾಳೆ. ಶುಕ್ರವಾರ ಯುವತಿಯ ಶವ ಅವರ ಮನೆಯಲ್ಲಿ ಪತ್ತೆಯಾಗಿದೆ. ದೇಹವು ರಕ್ತ ಸಿಕ್ತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದೆ.

ಲವ್ ಜಿಹಾದ್ ಗೆ ಯಾಕೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತದೆ ಎಂಬುವುದನ್ನು ಈಗಲಾದರೂ ಈಗಿನ ಯುವ ಜನತೆ ಅರ್ಥಮಾಡಿಕೊಳ್ಳಬೇಕು. ಇಲ್ಲದಿದ್ದರೆ ಈ ಯುವತಿಗಾದ ಪರಿಸ್ಥಿತಿ ನಿಮಗೂ ಬರಬಹುದು.

ಈ ಘಟನೆ ಹೈದರಾಬಾದ್ ನ ಆದಿಲಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ನಾಗಲ್ ಕೊಂಡ ಗ್ರಾಮದಲ್ಲಿ 21 ವರ್ಷದ ಯುವತಿಯ ಶವ ಪತ್ತೆಯಾಗಿದ್ದು, ಮಾಹಿತಿ ಪ್ರಕಾರ ಯುವತಿ ಅನ್ಯ ಧರ್ಮದ ಯುವಕನೊಂದಿಗೆ ಪ್ರೇಮ ಸಂಬಂಧ ಹೊಂದಿದ್ದು, ಎರಡು ತಿಂಗಳ ಹಿಂದೆ ತನ್ನ ಪ್ರಿಯಕರನೊಂದಿಗೆ ಮನೆ ಬಿಟ್ಟು ಓಡಿ ಹೋಗಿದ್ದಳು. ಬಳಿಕ ಬಾಲಕಿಯ ತಂದೆ ಪೊಲೀಸ್ ಠಾಣೆಯಲ್ಲಿ ಮಗಳು ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಯುವತಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಈ ಮಧ್ಯೆ ಯುವತಿ ತನ್ನ ಪ್ರಿಯಕರನ ಜೊತೆ ಮಹಾರಾಷ್ಟ್ರಕ್ಕೆ ಹೋಗಿ ವಾಸವಾಗಿದ್ದಾಳೆ ಎಂದು ಪೊಲೀಸರಿಗೆ ತಿಳಿದು ಬಂದಿದೆ. ಪೊಲೀಸ್ ತಂಡ ಮಹಾರಾಷ್ಟ್ರಕ್ಕೆ ತೆರಳಿ ಬಾಲಕಿಯನ್ನು ಕರೆತಂದು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದ್ದರು.

ಆದರೆ ಶುಕ್ರವಾರ ಬಾಲಕಿಯ ಶವ ಆಕೆಯ ಮನೆಯಲ್ಲಿ ಪತ್ತೆಯಾಗಿದೆ. ಹರಿತವಾದ ಆಯುಧದಿಂದ ಆಕೆಯ ಕತ್ತು ಸೀಳಲಾಗಿತ್ತು. ಪೊಲೀಸರು ಹೇಳುವ ಪ್ರಕಾರ, ಆಕೆಯ ಕುತ್ತಿಗೆಯಲ್ಲಿ ಆಳವಾದ ಗಾಯಗಳಿವೆ. ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಾಲಕಿಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ. ಆದರೆ, ಯುವತಿಯೊಬ್ಬಳು ಈ ರೀತಿ ಹರಿತವಾದ ಆಯುಧದಿಂದ ತನ್ನ ಕತ್ತು ಸೀಳಿಕೊಂಡಿದ್ದು ಹೇಗೆ ಎಂದು ಪೊಲೀಸ್ ಅಧಿಕಾರಿಗಳಿಗೆ ಕಾಡಿದ ಪ್ರಶ್ನೆಯಾಗಿತ್ತು. ಯುವತಿಯನ್ನು ಕೊಲೆ ಮಾಡಿರುವ ಶಂಕೆ ಇದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತಂದೆ ಸುಳ್ಳು ಕಥೆ ಹೇಳುತ್ತಿದ್ದಾರೆ. ಯುವತಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ಪ್ರಕರಣದ ತನಿಖೆಯಲ್ಲಿ ತೊಡಗಿದ್ದಾರೆ.

ತಂದೆಯೇ ಮಗಳು ಅನ್ಯ ಧರ್ಮದ ಹುಡುಗನ ಜೊತೆ ಮನೆ ಬಿಟ್ಟು ಓಡಿ ಹೋಗಿರುವುದಕ್ಕೆ ಸಿಟ್ಟು ಬಂದು ಕೊಲೆ ಮಾಡಿರುವ ಶಂಕೆ ಇದೆ ಎಂದು ಆದಿಲಾಬಾದ್ ಎಸ್ಪಿ ಉದಯ್ ಕುಮಾರ್ ರೆಡ್ಡಿ ಹೇಳಿದ್ದಾರೆ. ಬಾಲಕಿಯನ್ನು ಮಹಾರಾಷ್ಟ್ರದಿಂದ ಕರೆತಂದ ಬಳಿಕ ಆಕೆಗೆ ಕೌನ್ಸೆಲಿಂಗ್ ನಡೆಸಲಾಯಿತು. ಇದಾದ ಬಳಿಕ ಬಾಲಕಿಯನ್ನು ಮನೆಯವರಿಗೆ ಒಪ್ಪಿಸಲಾಗಿತ್ತು. ಆದರೆ ಯುವತಿ ತಾನು ಮಾಡಿದ ತಪ್ಪಿಗೆ ಭೀಕರವಾಗಿ ಬೆಲೆ ತೆತ್ತಿದ್ದಾಳೆ.

Leave A Reply

Your email address will not be published.