ಬಿರುವೆರ್ ಕುಡ್ಲ ಸುಳ್ಯ ಘಟಕದಿಂದ ಎಸ್ ಎಸ್ ಎಲ್ ಸಿಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಪ್ರದೀಪ್ ಟಿ ಗೆ ಸನ್ಮಾನ

ಬಿರುವೆರ್ ಕುಡ್ಲ ಸುಳ್ಯ ಘಟಕದ ವತಿಯಿಂದ ಎಸ್ ಎಸ್ ಎಲ್ ಸಿಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ವಿದ್ಯಾರ್ಥಿ, ಬಾಳಿಲ ಗ್ರಾಮದ ತೋಟಮೂಲೆ ಸದಾನಂದ ಪೂಜಾರಿ ಮತ್ತು ದೇವಕಿ ದಂಪತಿಯ ಪುತ್ರ ಪ್ರದೀಪ್ ಟಿ ಅವರನ್ನು ವಿದ್ಯಾರ್ಥಿಯ ಮನೆಯಲ್ಲಿ ಸನ್ಮಾನಿಸಲಾಯಿತು. ಬಿರುವೆರ್ ಕುಡ್ಲ ಸುಳ್ಯ ಘಟಕದ ಅಧ್ಯಕ್ಷ ಭಾಸ್ಕರ ಕೋಟ್ಯಾನ್ ಸನ್ಮಾನಿಸಿದರು. ಕಾರ್ಯದರ್ಶಿ ಪ್ರದೀಪ್ ನೆಟ್ಟಾರ್, ಸಂಘಟನಾ ಕಾರ್ಯದರ್ಶಿ ಉಮೇಶ್ ಮಣಿಕ್ಕಾರ, ಸದಾಶಿವ ಪೂಜಾರಿ ಉಸ್ಥಿತರಿದ್ದರು.

Leave A Reply

Your email address will not be published.