ಕಾರ್ಕಳ : ಗಾಂಧಿ ಹಂತಕ ” ನಾಥೂರಾಮ್ ಗೋಡ್ಸೆ ” ವಿವಾದಿತ ಬೋರ್ಡ್ ತೆರವುಗೊಳಿಸಿದ ಪೊಲೀಸರು !

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆಯೊಂದಕ್ಕೆ `ನಾಥೂರಾಮ್ ಗೋಡ್ಸ್‌’ ಹೆಸರು ಇಡಲಾಗಿದ್ದು, ಈ ಬಗ್ಗೆ ಕಾರ್ಕಳ ಯುವ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಬೋಳ ಗ್ರಾಮ ಪಂಚಾಯತ್ ಬಳಿಯಿರುವ ರಸ್ತೆಗೆ ‘ಪಡುಗಿರಿ ನಾಥರಾಮ್ ಗೋಡೆ ರಸ್ತೆ’ ಎಂದು ನಾಮಫಲಕ ಹಾಕಲಾಗಿದ್ದು, ಈ ವಿಚಾರ ವಿವಾದಕ್ಕೆ ಕಾರಣವಾಗಿತ್ತು. ಜೊತೆಗೆ ಇದರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಕೂಡಾ ಆಗಿತ್ತು.

ಈ ಹಿನ್ನಲೆ ಪಂಚಾಯತಿಗೆ ಭೇಟಿ ಕೊಟ್ಟ ಕಾರ್ಕಳ ಯುವ ಕಾಂಗ್ರೆಸ್ ಮುಖಂಡರು ದೇಶ ಕಂಡ ಮೊದಲ ಭಯೋತ್ಪಾದಕನ ಹೆಸರು ರಸ್ತೆಗೆ ಇಡಲಾಗಿದೆ ಎಂದು ಆರೋಪಿಸಿದರು. ಆದರೆ ಈ ಪಿಡಿಒ ಸ್ಪಷ್ಟನೆ ನೀಡಿದ್ದು, “ಪಂಚಾಯತ್ ಗೂ ಈ ಬೋರ್ಡ್ ಗೂ ಸಂಬಂಧವಿಲ್ಲ ಇದು ಯಾರೋ ಕಿಡಿಗೇಡಿಗಳು ಹಾಕಿದ ನಾಮಫಲಕ, ಪಂಚಾಯತ್ ನಲ್ಲಿ ಈ ಹೆಸರಿಡುವ ಬಗ್ಗೆ ಯಾವುದೇ ನಿರ್ಣಯ ಕೈಗೊಂಡಿಲ್ಲ. ಪಂಚಾಯತ್ ಈ ನಾಮಫಲಕ ಹಾಕಿಲ್ಲ” ಎಂದು ಹೇಳಿದ್ದಾರೆ.

ಪ್ರತಿಭಟನೆ ನಡೆಸುವ ಬಗ್ಗೆ ಕಾಂಗ್ರೆಸ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಎಚ್ಚೆತ್ತ ಕಾರ್ಕಳ ಪೊಲೀಸರು, ಬೋಳ ಗ್ರಾಮ ಪಂಚಾಯತ್ ಉಪಸ್ಥಿತಿಯಲ್ಲಿ ಕಾರ್ಯಾಚರಣೆ ನಡೆಸಿ ವಿವಾದಾಸ್ಪದ ಬೋರ್ಡ್ ತೆರವುಗೊಳಿಸಿದ್ದಾರೆ. ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ರಾಣಿ ಎಸ್ ಐ ತೇಜಸ್ವಿ ಭೇಟಿ ನೀಡಿದ್ದಾರೆ.

Leave A Reply

Your email address will not be published.