ಸುಳ್ಯ : ಯುವಕನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ

ಸುಳ್ಯದ ವೆಂಕಟರಮಣ ಸೊಸೈಟಿಯ ಬಳಿ ಜೂ.5ರ ರಾತ್ರಿ ಯುವಕನೊಬ್ಬನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ. ಆದರೆ ಗುಂಡು ಗುರಿ ತಪ್ಪಿ ಕಾರಿಗೆ ತಾಗಿದ ಹಿನ್ನೆಲೆಯಲ್ಲಿ ಯುವಕ ಅಪಾಯದಿಂದ ಪಾರಾಗಿದ್ದಾನೆ.

ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬಳಿ ಜಯನಗರದ ಮಹಮ್ಮದ್ ಶಾಯಿ ಎಂಬವರು ತನ್ನ ಕ್ರೆಟ್ಟಾ ಕಾರನ್ನು ನಿಲ್ಲಿಸಿ ತನ್ನ ತಂಗಿಯ ಮನೆಗೆ ಹೋಗಿದ್ದರು. ಅಲ್ಲಿಂದ ಹಿಂತಿರುಗಿ ಅವರು ತನ್ನ ಕಾರನ್ನು ಏರುತ್ತಿರುವ ಸಂದರ್ಭ ಹಿಂದಿನಿಂದ ಸ್ಕಾರ್ಪಿಯೋ ವಾಹನದಲ್ಲಿ ಬಂದ ದುಷ್ಕರ್ಮಿಗಳು ಶಾಯಿಯವರ ಕಡೆಗೆ ಗುಂಡು ಹಾರಿಸಿದರು.

ಗುಂಡು ಅದೃಷ್ಟವಶಾತ್ ಶಾಯಿಗೆ ಆಗದೆ ಅವರ ಕಾರಿಗೆ ತಾಗಿ ಕಾರು ಜಖಂಗೊಂಡಿದೆ. ಗುಂಡಿನ ಚಿಲ್ಡ್ ರಟ್ಟಿದ ಪರಿಣಾಮ ಶಾಯಿಯವರ ಹೊಟ್ಟೆಯ ಸಮೀಪಕ್ಕೆ ಗಾಯವಾಗಿದ್ದು, ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುಂಡು ಹಾರಿಸಿದ ದುಷ್ಕರ್ಮಿಗಳ ವಾಹನ ಪತ್ತೆಯಾಗಿಲ್ಲ. ಸರ್ಕಲ್ ಇನ್ಸ್ ಪೆಕ್ಟರ್ ನವೀನ್ ಚಂದ್ರ ಜೋಗಿ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Leave A Reply

Your email address will not be published.