ಬೀದಿನಾಯಿಗಳಿಗೆ ಹಿಂಸೆ ನೀಡುವವರೇ ಎಚ್ಚರ | ಭಾರೀ ಮೊತ್ತದ ದಂಡದ ಜೊತೆಗೆ ಜೈಲು ಸೇರಬೇಕಾದೀತು ಹುಷಾರ್…!!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಮೇಲೆ ಹಲ್ಲೆಯ ಪ್ರಕರಣ ಹೆಚ್ಚಾಗುತ್ತಿದ್ದಂತೆಯೇ ಇದೀಗ ಬಿಬಿಎಂಪಿ ಪಶುಸಂಗೋಪನಾ ಇಲಾಖೆ ಎಚ್ಚೆತ್ತುಕೊಂಡಿದೆ. ಬೀದಿ ನಾಯಿಗಳ ಮೇಲಿನ ಹಿಂಸೆ ತಡೆಗೆ ಕ್ರಮಕ್ಕೆ ಮುಂದಾಗಿದ್ದು, ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಗೆ ತಿದ್ದುಪಡಿ ತರಲು ಬಿಬಿಎಂಪಿ ಸಿದ್ಧತೆ ನಡೆಸಿದೆ.

ಬೆಂಗಳೂರಿನಲ್ಲಿ ದಿನೇ ದಿನೇ ಬೀದಿ ನಾಯಿಗಳ ಮೇಲಿನ ಹಿಂಸಾಚಾರ ಹೆಚ್ಚುತ್ತಿದೆ. ದಿನ ಬೆಳಗಾದರೆ ಬೀದಿ ನಾಯಿಗಳ ಮೇಲೆ ಹಲ್ಲೆ, ಕೊಲೆ, ಉದ್ದೇಶ ಪೂರ್ವಕವಾಗಿ ಅಪಘಾತ ಮಾಡಿ ಸಾಯಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಪ್ರಾಣಿ ಪ್ರಿಯರಿಂದ ಭಾರೀ ವಿರೋಧ ಕೂಡಾ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇದೀಗ ಬಿಬಿಎಂಪಿ ಪಶುಸಂಗೋಪನಾ ಇಲಾಖೆ ಎಚ್ಚೆತ್ತುಕೊಂಡಿದ್ದು, ಬೀದಿ ನಾಯಿಗಳಿಗೆ ಹಿಂಸೆ ನೀಡುವವರ ವಿರುದ್ದ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ಇನ್ನು ಮುಂದೆ ಬೀದಿನಾಯಿಗಳಿಗೆ ಹಿಂಸೆ ಕೊಟ್ಟಿರುವ ಪ್ರಕರಣ ಬೆಳಕಿಗೆ ಬಂದರೆ ಕ್ರಿಮಿನಲ್ ಮೊಕದ್ದಮೆ ಜೊತೆಗೆ 75 ಸಾವಿರ ದಂಡವನ್ನು ವಿಧಿಸಲಾಗುವುದು. ಮಾತ್ರವಲ್ಲ, ಮೂರರಿಂದ ಐದು ವರ್ಷ ಜೈಲು ಶಿಕ್ಷೆಯನ್ನು ಕೂಡಾ ಅನುಭವಿಸಬೇಕಾಗುತ್ತದೆ. ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಗೆ ತಿದ್ದುಪಡಿ ತರಲು ಬಿಬಿಎಂಪಿ ಮುಂದಾಗಿದೆ. ಪಿಸಿಎ ಆಕ್ಟ್ ಮೂಲಕ ಹೊಸ ನಿಯಮ ಜಾರಿಗೆ ಎಲ್ಲಾ ತಯಾರಿ ಪೂರ್ಣಗೊಳಿಸಿದೆ. ಈ ಸಂಬಂಧ ಕಾಯ್ದೆ ಪ್ರತಿ ಸಿದ್ಧವಾಗಿದ್ದು, ಜಾರಿ ಮಾಡುವುದಷ್ಟೇ ಬಾಕಿಯಿದೆ. ಬಿಬಿಎಂಪಿ ಪಶುಸಂಗೋಪನಾ ಇಲಾಖಾ ಅಧಿಕಾರಿ ಮಂಜುನಾಥ್ ಶಿಂಧೆ ಈ ಮಾಹಿತಿ ನೀಡಿದ್ದಾರೆ.

Leave A Reply

Your email address will not be published.