ಸ್ಯಾಂಡಲ್ ವುಡ್ ನಟ ಜೈಜಗದೀಶ್ ರಿಂದ ವ್ಯಕ್ತಿಯೋರ್ವನ ಮೇಲೆ ಅವಾಚ್ಯ ಶಬ್ದಗಳ ನಿಂದನೆ, ಹಲ್ಲೆ : ಪ್ರಕರಣ ದಾಖಲು

ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರುವ ವ್ಯಕ್ತಿ, ಚಿತ್ರನಟ ಕೂಡಾ, ಸಾರ್ವಜನಿಕವಾಗಿ ಯಾವುದೇ ರೀತಿಯ ಉದ್ಧಟತನ ಪ್ರದರ್ಶಿಸದೇ, ತಮ್ಮದೇ ವ್ಯಕ್ತಿತ್ವದಿಂದ ಇತರರಿಗೆ ಮಾದರಿಯಾಗಿರುತ್ತಾರೆ. ಏಕೆಂದರೆ ಚಿತ್ರನಟರನ್ನು ಅವರ ಅಭಿಮಾನಿಗಳು ಆರಾಧಿಸುತ್ತಾರೆ. ಅವರ ನಡೆ ನುಡಿಯನ್ನು ಫಾಲೋ ಮಾಡುತ್ತಾರೆ. ಆದರೆ ಆ ವ್ಯಕ್ತಿಗಳೇ ಸಾರ್ವಜನಿಕವಾಗಿ ಉದ್ಧಟತನ ತೋರಿದರೆ ಏನು ಮಾಡಬೇಕು….ಅಂಥದ್ದೇ ಒಂದು ಘಟನೆ ಈಗ ನಡೆದಿದೆ. ನಟ, ಖಳ ಪಾತ್ರದಲ್ಲಿ ಮಿಂಚಿದ್ದ ಜೈ ಜಗದೀಶ್ ಮೇಲೆ ಈ ಆರೋಪ ಕೇಳಿ ಬಂದಿದೆ.

ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ನಟ ಜೈಜಗದೀಶ್ ಮತ್ತಿತರರ ವಿರುದ್ಧ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕು ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂನ್ 5ರಂದು ಈ ಘಟನೆ ನಡೆದಿದೆ.

ಜಯರಾಮೇಗೌಡ ಎಂಬವರು ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರು ನಿರ್ವಾಹಕನಿಗೆ ಹೇಳಿ ಬಸ್ಸಿನಿಂದ ಕೆಳಗೆ ಇಳಿದಿದ್ದಾರೆ. ಇದೇ ಸಂದರ್ಭದಲ್ಲಿ ಹಿಂದಿನಿಂದ ಕಾರಿನಲ್ಲಿ ಬಂದ ಜೈಜಗದೀಶ್ ಮತ್ತಿತರರು, ಯಾಕೋ ಬಸ್ಸಿನಿಂದ ಬಾಟಲಿ ಎಸೆಯುತ್ತೀಯಾ ಎಂದು ಪ್ರಶ್ನಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಈಗ ಪ್ರಕರಣ ದಾಖಲಾಗಿದೆ.

Leave A Reply

Your email address will not be published.