ಅತಿವೇಗದ ಚಾಲನೆಯಿಂದ ಸೇತುವೆಗೆ ಡಿಕ್ಕಿ ಹೊಡೆದು ದುರಂತ ಸಾವು ಕಂಡ ಕಾರು ಚಾಲಕ!

ಚಿಕ್ಕಮಗಳೂರು: ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ನಿಯಂತ್ರಣ ತಪ್ಪಿ ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಚಾಲಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರೆಗೌಜ ಸಮೀಪ ಈ ದುರಂತ ಸಂಭವಿಸಿದೆ.

ಕಡೂರು ಕಡೆಯಿಂದ ಕಾರು ಚಿಕ್ಕಮಗಳೂರಿನ ಕಡೆಗೆ ತೆರಳುತ್ತಿದ್ದ ವೇಳೆಯಲ್ಲಿ ಹೊಂಗೆಕಟ್ಟೆ ತಿರುವಿನಲ್ಲಿ ಕಾರು ಸೇತುವೆಗೆ ಡಿಕ್ಕಿ ಹೊಡೆದು ಕೆಳಬಿದ್ದಿದ್ದು, ಅಪಘಾತದ ತೀವ್ರತೆಗೆ ಚಾಲಕ ಗಂಭೀರವಾಗಿ ಗಾಯಗೊಂಡಿದ್ದ ಎನ್ನಲಾಗಿದೆ.

ನಂತರ ಆತನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಯಿತಾದರೂ, ಗಂಭೀರವಾಗಿ ಗಾಯಕ್ಕೀಡಾಗಿದ್ದ ಚಾಲಕ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾನೆ.

Leave A Reply

Your email address will not be published.