ಸಿಎಂ ಯೋಗಿ ಆದಿತ್ಯನಾಥ್ ಭದ್ರತೆಯಲ್ಲಿ ಲೋಪ | 8 ಮಂದಿ ಪೊಲೀಸರು ಸಸ್ಪೆಂಡ್ !!

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತೆಯಲ್ಲಿ ಲೋಪ ಎಸಗಿದ ಕಾರಣಕ್ಕೆ ಓರ್ವ ಇನ್ಸ್ ಪೆಕ್ಟರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ 8 ಮಂದಿ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಸ್ವಾಗತಿಸಲು ಗೋರಕ್ ಪುರ ವಿಮಾನ ನಿಲ್ದಾಣಕ್ಕೆ ಯೋಗಿ ಆದಿತ್ಯನಾಥ್ ಶುಕ್ರವಾರ ತೆರಳುತ್ತಿರುವಾಗ ಭದ್ರತೆಯಲ್ಲಿ ಲೋಪ ಉಂಟಾಗಿತ್ತು. ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದ್ದು, ಶನಿವಾರ ಎಂಟು ಪೊಲೀಸರನ್ನು ಗೋರಕ್ ಪುರ ಎಸ್ ಎಸ್ ಪಿ ವಿಪಿನ್ ತಾಡಾ ಅಮಾನತು ಮಾಡಿದ್ದಾರೆ.

ಶುಕ್ರವಾರ ಬೆಳಗ್ಗೆ 11-28 ಸುಮಾರಿನಲ್ಲಿ ಜೆ.ಪಿ. ನಡ್ಡಾ ಅವರನ್ನು ಬರಮಾಡಿಕೊಳ್ಳಲು ಸಿಎಂ ಗೋರಕ್ ಪುರ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಕುಶ್ಮಾಹಿ ರಸ್ತೆಯಿಂದ ಅನೇಕ ವಾಹನಗಳು ಸಿಎಂ ಎದುರಿಗೆ ಬಂದಿದ್ದವು. ಈ ಘಟನೆ ಸಂಬಂಧ ತನಿಖೆಗೆ ಆದೇಶಿಸಿದ್ದ ತಾಡಾ, ಲೋಪ ಕಂಡುಬಂದ ಹಿನ್ನೆಲೆಯಲ್ಲಿ 8 ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಿದ್ದಾರೆ.

Leave A Reply

Your email address will not be published.