ದೇವರ ಕಟ್ಟೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳು : ಶುರುವಾಗುತ್ತಾ ಮತ್ತೊಂದು ಧರ್ಮದಂಗಲ್?

ಹಿಜಾಬ್ ಸಂಘರ್ಷ ನಡೆದ ನಂತರ ಹಲವಾರು ಧರ್ಮ ದಂಗಲ್ ವಿಷಯಗಳು ನಡೆದಿದೆ. ಈ ಮಧ್ಯೆ ಎಲ್ಲವೂ ತಣ್ಣಗಾಯ್ತು ಅನ್ನುವಷ್ಟರಲ್ಲಿ ಚಿಕ್ಕಮಗಳೂರಿನಲ್ಲಿ ಮುಸ್ಲಿಮರ ಭಕ್ತಿಯ ಮರಕ್ಕೂ ಬೆಂಕಿ ಬಿದ್ದಿರೋದು ಮತ್ತೊಂದು ಸಂಘರ್ಷ ಎದುರಾಗುತ್ತಾ ಎಂಬ ಆತಂಕ ಎದ್ದಿದೆ.

ಚಿಕ್ಕಮಗಳೂರು ನಗರದ ಹೊರವಲಯದ ಆದಿಶಕ್ತಿ ನಗರದಲ್ಲಿ ಇರುವ ಧಾರ್ಮಿಕ ಮರಕ್ಕೆ, ನೂರಾರು ವರ್ಷಗಳ ಇತಿಹಾಸವೂ ಇದೆ. ಆ ಮರಕ್ಕೆ ಮುಸ್ಲಿಮರ ನೂರಾರು ವರ್ಷಗಳಿಂದ ಪ್ರತಿ ದಿನ ಪೂಜೆ ಮಾಡಿಕೊಂಡು ಬರುತ್ತಿದ್ದರು. ಅಲ್ಲಿ ವರ್ಷಕ್ಕೊಮ್ಮೆ ಉತ್ಸವ ಕೂಡ ನಡೆಯುತ್ತಿತ್ತು. ಆದರೆ, ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಆ ಮರದ ಬುಡಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ಗ್ರಾಮದ ಮಧ್ಯೆ ಇದ್ದ ಈ ಮರವನ್ನ ಮುಸ್ಲಿಮರು ಭಕ್ತಿ-ಭಾವದಿಂದ ಪೂಜಿಸುತ್ತಿದ್ದರು. ಬಾವುಟಗಳು, ಮುಸ್ಲಿಂ ಧರ್ಮದ ಕ್ಯಾಲೆಂಡರ್ ಸೇರಿದಂತೆ ವಿವಿಧ ಪೂಜಾ ಸಾಮಾಗ್ರಿಗಳನ್ನಿಟ್ಟು ಭಕ್ತಿಯಿಂದ ಪೂಜೆ ಮಾಡಿಕೊಂಡು ಬರುತ್ತಿದ್ದ ಸ್ಥಳ ಬೆಂಕಿಯಿಂದ ಸಟ್ಟು ಕರಕಲಾಗಿದೆ. ಕಿಡಿಗೇಡಿಗಳ ಈ ದುಷ್ಕೃತ್ಯದಿಂದ ಗ್ರಾಮದಲ್ಲಿ ಶಾಂತಿ ಕದಡುವ ವಾತಾವರಣ ನಿರ್ಮಾಣವಾಗಿತ್ತು

ಸುದ್ದಿ ತಿಳಿದು ಸ್ಥಳಕ್ಕೆ ಬಂದ ಎಸ್ಪಿ ಅಕ್ಷಯ್ ಸೂಕ್ತ ತನಿಖೆ ನಡೆಸುವ ಭರವಸೆ ನೀಡಿದ್ದಾರೆ. ಸಕಾಲಕ್ಕೆ ಪೋಲೀಸರು ಹೋಗಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯಲು ಅವಕಾಶ ಕೊಡಲಿಲ್ಲ.ಬೆಂಕಿ ಇಟ್ಟವರು ಇಂತವರೇ ಅಂತ ಯಾರಿಗೂ ಗೊತ್ತಿಲ್ಲ. ದೂರು ದಾಖಲಿಸುವಂತೆ ತಿಳಿಸಿದ್ದರಿಂದ ಸ್ಥಳೀಯರು
ಚಿಕ್ಕಮಗಳೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಾವು ನಂಬಿಕೆ, ಭಕ್ತಿ-ಭಾವದಿಂದ ಪೂಜಿಸುತ್ತಿದ್ದ ಸ್ಥಳದಲ್ಲಿನ ಮರಕ್ಕೆ ಬೆಂಕಿ ಹಚ್ಚಿದವರನ್ನ ಪತ್ತೆ ಹಚ್ಚಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಊರಿನ ಕೆಲ ಸ್ಥಳಿಯರು ಇಲ್ಲಿ ಯಾವುದೇ ಖುರಾನ್ ಇರಲಿಲ್ಲ ಅಂತ ಹೇಳಿದ್ದರಿಂದ, ಒಟ್ಟಾರೆ ಪೊಲೀಸರ ಸಮಯಪ್ರಜ್ಞೆಯಿಂದ ಸಮಸ್ಯೆ ತಣ್ಣಗಾಗಿದೆ.

Leave A Reply

Your email address will not be published.