ಧರ್ಮ ನಿಂದಕಿ ಶೈಲಜಾ ಅಮರನಾಥ್‌ಗೆ ಶ್ರದ್ಧಾಂಜಲಿ ಬ್ಯಾನರ್

ಹಿಂದೂ ದೇವರುಗಳನ್ನು ಅವಮಾನಿಸಿದ ಶೈಲಜಾ ಅಮರ್ ನಾಥ್ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದೆ. ಈಗ ಪುತ್ತೂರಿನ ಆಕೆಯ ಆಫೀಸಿನ ಮುಂದೆ ಆಕಿಗೆ ಅಂತಿಮ ನಮನ ಸಲ್ಲಿಸಲಾಗಿದೆ ಪುತ್ತೂರಿನ ಆಕೆಯ ಕಚೇರಿಯ ಎದುರು ” ಧರ್ಮದ್ರೋಹಿ ಶೈಲಜಾ, ಮತ್ತೆ ಹಿಂದೂಸ್ತಾನದಲ್ಲಿ ಹುಟ್ಟಿ ಬರಬೇಡ ” ಎಂಬ ಪೋಸ್ಟರ್ ರಾರಾಜಿಸುತ್ತಿದೆ.

ಹಿಂದು ಆರಾಧ್ಯ ದೇವ ಗಳಾದ ರಾಮ ಹನುಮಂತನ ಮಧ್ಯೆ ಸಲಿಂಗ ಕಾಮದ ವಿಷಯ ಎತ್ತಿದ್ದಾಳೆ ಎಂಬ ಬಗ್ಗೆ ಆಕೆಯ ವಿರುದ್ಧ ಆರೋಪಗಳು ಕೇಳಿಬಂದಿದ್ದವು.
ಈ ಬಗ್ಗೆ ಹಿಂದೂ ಸಂಘಟನೆಗಳಿಂದ ಪೊಲೀಸ್ ಕಚೇರಿಗೆ ದೂರು ಕೂಡ ನೀಡಲಾಗಿತ್ತು.

ಇದರ ಬೆನ್ನಲ್ಲೇ ಆಕೆಯ ಮನೆಗೆ ಯುವಕರ ಗುಂಪೊಂದು ದಿಢೀರ್ ದಾಳಿ ನಡೆಸಿ ಕಿಟಕಿ ಗಾಜುಗಳನ್ನು ಒಡೆದು ಹಾಕಿತ್ತು. ಇದೀಗ ಆಕೆಗೆ ಶ್ರದ್ಧಾಂಜಲಿ ಅರ್ಪಿಸಿ ಹಿಂದೂಸ್ತಾನದಲ್ಲಿ ಮತ್ತೆ ಹುಟ್ಟಿ ಬರಬಾರದು ಎನ್ನುವ ಪೋಸ್ಟರ್ ಪ್ರಿಂಟ್ ಮಾಡಿ ಆಕೆಯ ಕಚೇರಿಗೆ ಅಂಟಿಸಲಾಗಿದೆ.

ಸಾಮಾಜಿಕ ಜಾಲತಾಣವಾದ ಕ್ಲಬ್ ಹೌಸ್ ಮೂಲಕ ನಡೆದ ಚರ್ಚಾಕೂಟದಲ್ಲಿ ಶ್ರೀರಾಮಚಂದ್ರ, ಸೀತಾಮಾತೆ ಮತ್ತು ಹನುಮಂತ ದೇವರನ್ನು ಶೈಲಜಾ ಅಮರನಾಥರವರು ಅವಮಾನಿಸಿದ್ದು, ಈಗ ಜನರ ಆಕ್ರೋಶ ಹೆಚ್ಚಾಗಿದೆ.

ಇಷ್ಟು ಮಾತ್ರವಲ್ಲದೇ, ಕಾಂಗ್ರೆಸ್ ನ ಐಟಿ ಸೆಲ್ ಕಾಯದರ್ಶಿಯಾಗಿರುವ ನ್ಯಾಯವಾದಿ ಶೈಲಜಾ ಅಮರನಾಥರವರ ಪುತ್ತೂರು ಬಪ್ಪಳಿಗೆ ಮನೆಗೆ ಯುವಕರ ತಂಡ ದಾಳಿ ನಡೆಸಿರುವ ಘಟನೆ ಇಂದು ಸಂಜೆ ನಡೆದಿತ್ತು.

ಸಾಮಾಜಿಕ ಜಾಲತಾಣವಾದ ಕ್ಲಬ್ ಹೌಸ್ ಮೂಲಕ ನಡೆದ ಚರ್ಚಾಕೂಟದಲ್ಲಿ ಶ್ರೀರಾಮಚಂದ್ರ, ಸೀತಾಮಾತೆ ಮತ್ತು ಹನುಮಂತ ದೇವರನ್ನು ಶೈಲಜಾ ಅಮರನಾಥರವರು ಅವಮಾನಿಸಿದ್ದಾರೆ ಎಂದು ಆರೋಪಿಸಿ ವಿಶ್ವಹಿಂದೂ ಪರಿಷದ್ ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆ ಪ್ರಮುಖರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದಾದ ನಂತರ ಶೈಲಜಾ ಅವರ ಮನೆಯಂಗಳಕ್ಕೆ ಬಂದಿರುವ ಯುವಕರ ಗುಂಪೊಂದು ಮನೆಗೆ ದಾಳಿ ನಡೆಸಿ ಗಾಜುಗಳನ್ನು ಪುಡಿಗೈದು, ಕಪ್ಪು ಮಸಿ ಎರಚಿ ಪರಾರಿಯಾಗಿರುವುದಾಗಿದ್ದಾರೆ. ಮಹಿಳಾ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾಯದರ್ಶಿಯೂ ಆಗಿರುವ ಶೈಲಜಾ ಅಮರನಾಥರವರು ಮಾಹಿತಿ ನೀಡಿದ ಕೂಡಲೇ ಪೊಲೀಸರು ಶೈಲಜಾರವರ ಮನೆಗೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

Leave A Reply

Your email address will not be published.