ವಿಟ್ಲ : ನೇಣು ಬಿಗಿದು ಯುವಕ ಆತ್ಮಹತ್ಯೆ!

ವಿಟ್ಲ: ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ
ಮಾಡಿಕೊಂಡ ಘಟನೆ ಕನ್ಯಾನದಲ್ಲಿ ನಡೆದಿದೆ.

ಮೃತರು ಕನ್ಯಾನದ ಚಾಕೆತ್ತಡಿ ದಿನೇಶ್ ಎಂದು ತಿಳಿದು ಬಂದಿದೆ.

ಮೃತರು ಅವಿವಾಹಿತರಾಗಿದ್ದು, ಆರ್ಥಿಕ ಸಂಕಷ್ಟದಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೊದಲು ಆಟೋ ಚಾಲಕನಾಗಿ ದುಡಿಯುತ್ತಿದ್ದು, ಈಗ ಯಕ್ಷಗಾನ ಮೇಳದಲ್ಲಿ ಕೆಲಸ ಮಾಡುತ್ತಿದ್ದರು. ಈ ಘಟನೆ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.