ಪುತ್ತೂರು:ಅಕ್ರಮವಾಗಿ ಮನೆಗೆ ಪ್ರವೇಶಿಸಿ ದಂಪತಿಗಳಿಗೆ ಹಲ್ಲೆ-ಕೊಲೆ ಬೆದರಿಕೆ!! ಮಹಿಳೆಯ ವಿರುದ್ಧ ಪ್ರಕರಣ ದಾಖಲು

ಪುತ್ತೂರು:ಅಕ್ರಮವಾಗಿ ಮನೆಗೆ ಪ್ರವೇಶಿಸಿ ಮಹಿಳೆ ಹಾಗೂ ಆಕೆಯ ಪತಿಗೆ ಗಂಭೀರ ಸ್ವರೂಪದ ಹಲ್ಲೆ ನಡೆಸಿ ಕೊಲೆ ಬೆದರಿಕೆ ಒಡ್ಡಿದ ಆರೋಪದ ಹಿನ್ನೆಲೆಯಲ್ಲಿ ಸುಮಂಗಲ ಶೆಣೈ ಎಂಬಾಕೆಯ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ವಿವರ:ಆರೋಪಿ ಸುಮಂಗಲ ಶೆಣೈ ಹಾಗೂ ದೂರುದಾರ, ಗಾಯಳು ಪುತ್ತೂರು ಕೈಕಾರ ನಿವಾಸಿ ನವೀನ್ ಕುಮಾರ್ ರೈ ಎಂಬವರು ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು,ವ್ಯವಹಾರದ ವಿಚಾರದಲ್ಲಿ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು ಎನ್ನಲಾಗಿದೆ.

ಇದೇ ವಿಚಾರದ ಸಂಬಂಧ ಆರೋಪಿ ಮಹಿಳೆ ನವೀನ್ ರೈ ಮನೆಗೆ ಅಕ್ರಮ ಪ್ರವೇಶ ಮಾಡಿ ದೂರುದಾರರ ಪತ್ನಿಗೆ ಹಲ್ಲೆ ನಡೆಸಿದ್ದು, ಬಿಡಿಸಲು ಪ್ರಯತ್ನಿಸಿದಾಗ ನವೀನ್ ರೈ ಹಾಗೂ ಅವರ ಪತ್ನಿಗೆ ಬಿಸಿಯಾದ ಇಸ್ತ್ರಿ ಪೆಟ್ಟಿಗೆಯನ್ನು ಇಟ್ಟು ಸುಡಲು ಪ್ರಯತ್ನಿಸಿ, ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂದು ದೂರಲಾಗಿದೆ.

ಸದ್ಯ ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರೋಪಿತ ಮಹಿಳೆ ಸುಮಂಗಲ ಶೆಣೈ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave A Reply

Your email address will not be published.