ಶಿಶಿಲ: ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ

ಬೆಳ್ತಂಗಡಿ: ತಾಲೂಕಿನ ಶಿಶಿಲ ಗ್ರಾಮದ ಬದ್ರಜಾಲ್ ಎಂಬಲ್ಲಿ ವ್ಯಕ್ತಿಯೊಬ್ಬರನ್ನು ತಂಡವೊಂದು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿ, ವಾಹನವನ್ನು ಜಖಂಗೊಳಿಸಿದ ಘಟನೆಯೊಂದು ಬೆಳಕಿಗೆ ಬಂದಿದ್ದು, ಹಲ್ಲೆಯಿಂದ ಗಾಯಗೊಂಡ ವ್ಯಕ್ತಿ ಪುರುಷೋತ್ತಮ ಎಂಬವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಗಾಯಳು ಪುರುಷೋತ್ತಮ್ ತಮ್ಮ ಓಮ್ನಿ ಕಾರಿನಲ್ಲಿ ಬರುತ್ತಿದ್ದಾಗ, ಬೊಲೆರೋ ವಾಹನದಲ್ಲಿ ಬಂದ ತಂಡವೊಂದು ಕಾರಿಗೆ ಡಿಕ್ಕಿ ಹೊಡೆದು ದಾಳಿ ನಡೆಸಿದ್ದು, ರಾಡ್ ಹಾಗೂ ತಲವಾರಿನಿಂದ ಹಲ್ಲೆ ನಡೆಸಿ ಪರಾರಿಯಾಗಿದೆ ಎನ್ನಲಾಗಿದೆ. ಕೂಡಲೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave A Reply

Your email address will not be published.