ರಾಜ್ಯದ ಈ ಊರುಗಳಿಗೆ ಮಳೆಯಿಂದಾಗಿ ಶಾಲಾ ಕಾಲೇಜುಗಳಿಗೆ ರಜೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರೆದಿದ್ದು, ಶೃಂಗೇರಿ, ಕಳಸ ತಾಲೂಕಿನ ಶಾಲೆಗೆ ಇಂದು, ನಾಳೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ ಶಾಲೆಗಳಿಗೆ ರಜೆ ನೀಡಲಾಗಿದೆ. ಜುಲೈ 5, 6ರಂದು ರಜೆ ಘೋಷಿಸಿ ಚಿಕ್ಕಮಗಳೂರು ಡಿಸಿ ಆದೇಶ ಹೊರಡಿಸಿದ್ದಾರೆ. 

ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಹೆಬ್ರಿ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಅಪರ ಜಿಲ್ಲಾಧಿಕಾರಿ ಬಿ.ಎಸ್. ವೀಣಾ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ . ಜಿಲ್ಲಾಧಿಕಾರಿ ಡಾ . ಕೆ . ವಿ . ರಾಜೇಂದ್ರ ಸೂಚನೆ ಮೇರೆಗೆ ತಹಶೀಲ್ದಾರ್ ರಜೆ ನೀಡಿದ್ದಾರೆ .

ಕೊಡಗಿನಲ್ಲಿ ಮಳೆಯಿಂದ ಮಡಿಕೇರಿ ತಾಲೂಕಿನ ಭಾಗಮಂಡಲ – ನಾಪೋಕ್ಲು ರಸ್ತೆ ಜಲಾವೃತವಾಗಿದೆ . ಈ ಹಿನ್ನೆಲೆ ಶಾಲೆಗಳಿಗೆ ರಜೆ ನೀಡಲು ಭಾಗಮಂಡಲ ಜನರು ಒತ್ತಾಯಿಸಿದ್ದಾರೆ .

Leave A Reply

Your email address will not be published.