ಸುಳ್ಯ: ಪೌರ ಕಾರ್ಮಿಕ ವಿಷ ಸೇವಿಸಿ ಆತ್ಮಹತ್ಯೆ

ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ದುಗಳಡ್ಕದಲ್ಲಿ ನಡೆದಿದೆ.
ಆತ್ಮ ಹತ್ಯೆ ಮಾಡಿಕೊಂಡ ವ್ಯಕ್ತಿ ದುಗಳಡ್ಕದ ನಿರೆಬಿದಿರೆ ನಿವಾಸಿ ದೇವನಾಥ್ ಎಂಬುದಾಗಿ ತಿಳಿದು ಬಂದಿದೆ.

ನಗರ ಪಂಚಾಯತ್ ನಲ್ಲಿ ಕಸ ಸಂಗ್ರಹಣೆ ಮತ್ತು ವಿಲೇವಾರಿ ಘಟಕದಲ್ಲಿ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದು, ನಿನ್ನೆ ವಿಷ ಕುಡಿದಿದ್ದು ತಕ್ಷಣ ಸ್ನೇಹಿತರು ಸುಳ್ಯದ ಆಸ್ಬತ್ರೆಗೆ ದಾಖಲಿಸಿದ್ದಾರೆ.

ಬಳಿಕ ಹೆಚ್ಚಿನ ಚಿಕಿತ್ಸೆ ಗೆ ಮಂಗಳೂರಿನ ಆಸ್ಪತ್ರೆಗೆ ಗೆ ದಾಖಲು ಮಾಡಿಸಿದರೂ ಅಷ್ಟೊತ್ತಿಗಾಗಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

Leave A Reply

Your email address will not be published.