Flash News । ಗೋ ಹತ್ಯೆ, ಗೋವುಗಳ ಕಳ್ಳತನ ಮಾಡಿದ ಆರೋಪಿಗಳ ಆಸ್ತಿ ಮುಟ್ಟುಗೋಲು -ಭರತ್ ಶೆಟ್ಟಿ

ಗೋಹತ್ಯೆ,ಗೋವುಗಳ ಕಳ್ಳತನ ಆರೋಪಿಗಳ ಆಸ್ತಿ ಮುಟ್ಟುಗೋಲು ಮಾಡುವಂತೆ ಮಂಗಳೂರು ಶಾಸಕ ಭರತ್ ಶೆಟ್ಟಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಅವರು, ಪೊಲೀಸರು ಅಕ್ರಮ ಗೋಹತ್ಯೆ, ಗೋವುಗಳ ಕಳವು ಪ್ರಕರಣ ದಾಖಲಿಸಿದ ಬಳಿಕ ಕಂದಾಯ ಇಲಾಖೆ ಅಧಿಕಾರಿಗಳು ಆರೋಪಿಗಳ ಆಸ್ತಿ ಮುಟ್ಟುಗೋಲಿಗೆ ಬೇಕಾದ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

ಗೋಹತ್ಯೆ ಆರೋಪ ರುಜುವಾತಾದರೆ ಅಂತಹವರ ಆಸ್ತಿ ಮುಟ್ಟುಗೋಲು ದಂಡಾಸ್ತ್ರ ಪ್ರಯೋಗಿಸುವಂತೆ ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಭರತ್ ಶೆಟ್ಟಿ ಹೇಳಿದ್ದಾರೆ.

Leave A Reply

Your email address will not be published.