ಕಡಬ:ಭೀಕರ ರಸ್ತೆ ಅಪಘಾತ!! ಆಟೋ ಚಾಲಕನ ಸ್ಥಿತಿ ಗಂಭೀರ-ಆಸ್ಪತ್ರೆಗೆ ದಾಖಲು

ಕಡಬ:ಗೂಡ್ಸ್ ವಾಹನ ಹಾಗೂ ಆಟೋ ನಡುವೆ ಅಪಘಾತ ಸಂಭವಿಸಿ ಆಟೋ ಚಾಲಕ ಕಡಬ ನಿವಾಸಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂತೂರು-ಪದವು ಸಮೀಪದ ಎರ್ಮಾಳ ಎಂಬಲ್ಲಿ ನಡೆದಿದೆ.

ಉಪ್ಪಿನಂಗಡಿ ಕಡೆಯಿಂದ ಕಡಬಕ್ಕೆ ಬರುತ್ತಿದ್ದ ಟಾಟಾ ಏಸ್ ವಾಹನ ಹಾಗೂ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಆಟೋ ಮುಖಾಮುಖಿಯಾದ ಪರಿಣಾಮ ಆಟೋ ಚಾಲಕ ಮರ್ದಾಳ ನಿವಾಸಿ ಗಂಭೀರ ಗಾಯಗೊಂಡಿದ್ದು, ಕೂಡಲೇ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave A Reply

Your email address will not be published.