ಬೀದಿಬದಿ ವ್ಯಾಪಾರಿಗಳಿಗೆ ಸಿಹಿಸುದ್ದಿ !

ಬೆಂಗಳೂರು : ಬೀದಿ ಬದಿ ವ್ಯಾಪಾರಿಗಳಿಗೆ ಸಿಹಿಸುದ್ದಿ, ಪಿಎಂ ಸ್ವನಿಧಿ ಯೋಜನೆಯಡಿ ಜುಲೈ 13 ರಂದು ಕಿರು ಸಾಲ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಕೆ.ಆರ್. ಮಾರುಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿನ 300 ಬೀದಿಬದಿ ವ್ಯಾಪಾರಿಗಳಿಗೆ ಜುಲೈ 13 ರಂದು ಕಿರುಸಾಲ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ರಾಮ್ ಪ್ರಸಾತ್ ಮನೋಹತ್ ತಿಳಿಸಿದ್ದಾರೆ.

ಪಿಎಂ ಸ್ವನಿಧಿ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ 10 ಸಾವಿರ ರೂ.ಗಳಂತೆ ಎಚ್ ಡಿಎಫ್ ಸಿ ಬ್ಯಾಂಕ್ ನಿಂದ ಕಿರುಸಾಲ ವಿತರಣೆ ಮಾಡಲಾಗುತ್ತದೆ.

Leave A Reply

Your email address will not be published.