ದ್ವಿತೀಯ ಪಿಯುಸಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!

ಬೆಂಗಳೂರು: ದ್ವಿತೀಯ ಪಿಯುಸಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸಿಹಿ ಸುದ್ದಿ ದೊರಕಿದ್ದು, ವಿಶೇಷ ದಂಡ ಶುಲ್ಕದೊಂದಿಗೆ ದ್ವಿತೀಯ ಪಿಯುಸಿ ತರಗತಿಗತಿಗೆ ಪ್ರವೇಶ ಪಡೆಯುವ ದಾಖಲಾತಿ ದಿನಾಂಕವನ್ನು ವಿಸ್ತರಿಸಿ ಇಲಾಖೆ ಸುತ್ತೋಲೆ ಹೊರಡಿಸಿದೆ.

2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿಗೆ ಸಂಬಂಧಿಸಿದಂತೆ ದಾಖಲಾತಿ ದಿನಾಂಕವನ್ನು ವಿಶೇಷ ದಂಡ ಶುಲ್ಕದೊಂದಿಗೆ ಜುಲೈ 8 ರವರೆಗೆ ನಿಗದಿಪಡಿಸಲಾಗಿತ್ತು. ಆದರೆ, ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಅನಾನುಕೂಲತೆಯನ್ನು ಮನಗಂಡ ಪದವಿ ಪೂರ್ವ ಶಿಕ್ಷಣ ಇಲಾಖೆಯು, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಜುಲೈ 22ರವರೆಗೆ ವಿಶೇಷ ದಂಡಶುಲ್ಕದೊಂದಿಗೆ ವಿಸ್ತರಿಸಿ ಸುತ್ತೋಲೆಯನ್ನು ಹೊರಡಿಸಿದೆ.

ವಾರ್ಷಿಕವಾಗಿ ಕನಿಷ್ಠ 75 % ಹಾಜರಾತಿಯ ಅವಶ್ಯಕತೆ ಇರುವುದರಿಂದ ಈ ದಿನಾಂಕವನ್ನು ಮುಂದೆ ಯಾವುದೇ ಕಾರಣಕ್ಕೂ ವಿಸ್ತರಿಸಲಾಗುವುದಿಲ್ಲ. ಇದು ಕೊನೆಯ ಅವಕಾಶವಾಗಿದೆ ಎಂದು ಪಿಯು ಬೋರ್ಡ್ ಸ್ಪಷ್ಟಪಡಿಸಿದೆ.

Leave A Reply

Your email address will not be published.