ಉಡುಪಿ ಜಿಲ್ಲೆಯಾದ್ಯಂತ ನಾಳೆ ಶಾಲೆಗಳಿಗೆ ರಜೆ ಇಲ್ಲ

ಉಡುಪಿ ಜಿಲ್ಲೆಯಾದ್ಯಂತ ಮಳೆ ಇಳಿಮುಖವಾಗಿದ್ದು, ರೆಡ್ ಅಲರ್ಟ್ ಬದಲಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ ಹಾಗೂ ಇತರ ಶಿಕ್ಷಣ ಸಂಸ್ಥೆಗಳು ಮುಂಜಾಗ್ರತಾ ಕ್ರಮ ವಹಿಸಿ ಜು.12 ರಿಂದ ಕಾರ್ಯ ನಿರ್ವಹಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ತಿಳಿಸಿದ್ದಾರೆ. ಏನಾದರೂ ಸಮಸ್ಯೆಗಳಿದ್ದರೆ ಶಿಕ್ಷಣ ಸಂಸ್ಥೆಗಳ ಮೇಲಾಧಿಕಾರಿಗಳ ಒಪ್ಪಿಗೆ ಪಡೆದು ಸ್ಥಳೀಯವಾಗಿ ನಿರ್ಧಾರ ಕೈಗೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.