ಪುತ್ತೂರು : ಹಿಂದೂ ಯುವತಿಗೆ ಚಾಕಲೇಟ್ ನೀಡಿ ಸೆಲ್ಫಿ ತೆಗೆಯಲು ಒತ್ತಾಯ | ಹಿಂದೂ ಹುಡುಗರಿಗೆ ಹಲ್ಲೆ ಆರೋಪದಲ್ಲಿ ದೂರು ದಾಖಲು

ಪುತ್ತೂರು : ಬಸ್ ನಿಲ್ದಾಣದಲ್ಲಿ ಹಿಂದೂ ವಿದ್ಯಾರ್ಥಿಗಳ ಮೇಲೆ ಅನ್ಯ ಕೋಮಿನ ವಿದ್ಯಾರ್ಥಿಗಳ ತಂಡವೊಂದು ಜು.15 ರಂದು ಸಂಜೆ ಹಲ್ಲೆ ನಡೆಸಿದ ಘಟನೆಯೊಂದು ನಡೆದಿದೆ. ಈ ಬಗ್ಗೆ ಪುತ್ತೂರು ನಗರ ಠಾಣೆಗೆ ಆ ವಿದ್ಯಾರ್ಥಿ ದೂರು ನೀಡಿರೋದಾಗಿ ತಿಳಿದು ಬಂದಿದೆ.

ಪುತ್ತೂರು ಸರಕಾರಿ ಕಾಲೇಜಿನ ಹಿಂದೂ ವಿದ್ಯಾರ್ಥಿನಿಯೊಬ್ಬಳಿಗೆ ಜು.14 ರಂದು ಅದೇ ಕಾಲೇಜಿನ ಆನ್ಯ ಧರ್ಮದ ವಿದ್ಯಾರ್ಥಿ ಚಾಕಲೇಟ್ ನೀಡಿ ಸೆಲ್ಫಿ ತೆಗೆಯಲೆತ್ನಿಸಿದ್ದ.

ಈ ಕುರಿತು ಮಾಹಿತಿ ಪಡೆದ ಹಿಂದು ವಿದ್ಯಾರ್ಥಿಗಳ
ತಂಡವು ಪುತ್ತೂರು ಬಸ್ಸು ನಿಲ್ದಾಣದ ಬಳಿ ಚಾಕಲೇಟು ನೀಡಿದ ವಿದ್ಯಾರ್ಥಿಯಲ್ಲಿ ಪ್ರಶ್ನೆ ಮಾಡಿದ್ದಾರೆ ಎನ್ನಲಾಗಿದೆ. ಆವಾಗ ಅವರ ಮಧ್ಯೆ ವಾಗ್ವಾದ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ವೇಳೆ ಎರಡು ತಂಡದ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಹಿಂದೂ ವಿದ್ಯಾರ್ಥಿಗಳ ಮೇಲೆ ಮತ್ತೊಂದು ತಂಡ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ.

ಬಸ್ಸು ನಿಲ್ದಾಣದಲ್ಲಿ ಎರಡು ವಿದ್ಯಾರ್ಥಿಗಳ ತಂಡ ವಾಗ್ವಾದದಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಪಡೆದ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು ಎಂದು ಮೂಲಗಳು ತಿಳಿಸಿವೆ.

ಬಳಿಕ ಹಲ್ಲೆಗೊಳಗಾದ ಬಗ್ಗೆ ಹಿಂದೂ ವಿದ್ಯಾರ್ಥಿಗಳು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

Leave A Reply

Your email address will not be published.