ಖ್ಯಾತ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲು!!!

ರಾಷ್ಟ್ರ ಪ್ರಶಸ್ತಿ ವಿಜೇತ, ಪದ್ಮಶ್ರೀ ಪುರಸ್ಕೃತ ನಿರ್ದೇಶಕ ಮಣಿರತ್ನಂ ಅವರಿಗೆ ಕೊರೊನಾ ಸೋಂಕು ತಗುಲಿರುವ ಕಾರಣ ಚೆನ್ನೈನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದಾರೆ. ಮಣಿರತ್ನಂ ಅವರ ಆರೋಗ್ಯದ ಸ್ಥಿತಿ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಬೇಕಿದೆ.

ಕನ್ನಡದ ‘ಪಲ್ಲವಿ ಅನುಪಲ್ಲವಿ’ ಸಿನಿಮಾ ಮೂಲಕ ಮಣಿರತ್ನಂ ಅವರು 1983ರಲ್ಲಿ ಚಿತ್ರರಂಗಕ್ಕೆ ಬಂದರು. ಈ ಚಿತ್ರದಲ್ಲಿ ಅನಿಲ್ ಕಪೂರ್, ಲಕ್ಷ್ಮೀ ನಟಿಸಿದ್ದರು. 1986ರಲ್ಲಿ ‘ಮೌನ ರಾಗಂ’ ಚಿತ್ರವು ಅವರನ್ನು ತಮಿಳು ಚಿತ್ರರಂಗದಲ್ಲಿ ಯಶಸ್ವಿ ನಿರ್ದೇಶಕನನ್ನಾಗಿ ಮಾಡಿತು.

1988ರಲ್ಲಿ ನಟಿ ಸುಹಾಸಿನಿ ಅವರನ್ನು ಮಣಿರತ್ನಂ ಮದುವೆಯಾಗಿದ್ದಾರೆ. ಈ ಜೋಡಿಗೆ ನಂದನ್ ಎಂಬ ಪುತ್ರನಿದ್ದಾನೆ. ಚೆನ್ನೈನಲ್ಲಿ ನೆಲೆಸಿರುವ ಈ ಕುಟುಂಬ ಮದ್ರಾಸ್ ಟಾಕೀಸ್ ಎಂಬ ಪ್ರೊಡಕ್ಷನ್ ಹೌಸ್ ಮೂಲಕ ಸಿನಿಮಾಗಳ ನಿರ್ಮಾಣ ಮಾಡುತ್ತದೆ.

Leave A Reply

Your email address will not be published.