ಪಂಜಾಬ್ ಸಿಎಂ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲು

ತೀವ್ರ ಅನಾರೋಗ್ಯದ ಹಿನ್ನಲೆಯಲ್ಲಿ‌ ಪಂಜಾಬ್ ಮುಖ್ಯಮಂತ್ರಿ ಭಗವಂತ್‌ ಮಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾನ್, ಹೊಟ್ಟೆನೋವಿನಿಂದ ಬಳಲುತ್ತಿದ್ದು, ಬುಧವಾರ ಸಂಜೆ ಉಲ್ಬಣಗೊಡಿತ್ತು. ಪರೀಕ್ಷೆಗೊಳಪಡಿಸಿದ ವೈದ್ಯರು ಅವರನ್ನು ಆಸ್ಪತ್ರೆಗೆ ದಾಖಲಾಗಲು ಸಲಹೆ ನೀಡಿದ್ದರು. ಇದೀಗ ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಲಗಳ ಪ್ರಕಾರ ಅವರು ಹೊಟ್ಟೆಯಲ್ಲಿನ ಸೋಂಕಿನಿಂದ ಬಳಲುತ್ತಿದ್ದಾರೆ.

ಆಸ್ಪತ್ರೆಯು ನಡೆಸಿದ ಹೆಚ್ಚಿನ ವೈದ್ಯಕೀಯ ತನಿಖೆಗಳಲ್ಲಿ, ಅವರಿಗೆ ಹೊಟ್ಟೆಯಲ್ಲಿ ಸೋಂಕು ಕಂಡುಬಂದಿದೆ ಎಂದು ವರದಿಯಾಗಿದೆ. ಪಕ್ಷದ ಮೂಲಗಳ ಪ್ರಕಾರ ಅವರು ಸಾಮಾನ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

ಇದೇ ಮಾ.16ರಂದು ಭಗವಂತ್ ಮಾನ್ ಪಂಜಾಬ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

Leave A Reply

Your email address will not be published.