ಪುತ್ತೂರು : ವರದಕ್ಷಿಣೆ ರಹಿತ ವಿವಾಹವಾಗಿದ್ದೇನೆ ಎಂದು ಪ್ರಚಾರ ಮಾಡಿ ವರದಕ್ಷಿಣೆ ಪಡೆದ ಭೂಪ | ಮತ್ತಷ್ಟು ವರದಕ್ಷಿಣೆ ತರುವಂತೆ ಪತ್ನಿಗೆ ಹಲ್ಲೆ

ಪುತ್ತೂರು:ವರದಕ್ಷಿಣೆ ರಹಿತ ವಿವಾಹ ಮಾಡಿಕೊಳ್ಳುವುದಾಗಿ ಪ್ರಚಾರಗಿಟ್ಟಿಸಿ ಬಳಿಕ ವರದಕ್ಷಿಣೆ ಪಡೆದು ಮದುವೆಯಾಗಿರುವ ವ್ಯಕ್ತಿಯೋರ್ವ ಇದೀಗ ಮತ್ತಷ್ಟು ವರದಕ್ಷಿಣೆ ತರುವಂತೆ ಮಾನಸಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ್ದು,ಹಲ್ಲೆಗೊಳಗಾದ ಆತನ ಪತ್ನಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ರಾಮಕುಂಜ ಆತೂರು ಪೆರ್ಜಿ ನಿವಾಸಿ ಪಿ.ಹುಸೈನ್ ಮತ್ತು ಮೈಮುನಾ ದಂಪತಿ ಪುತ್ರಿ ಸೆಮೀಮಾ(28ವ.) ಎಂಬವರೇ ಹಲ್ಲೆಗೊಳಗಾಗಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾದವರು.

2013ರ ಜೂ.15ಕ್ಕೆ ನನ್ನ ವಿವಾಹವು ಹಾಸನದ ಚಿಕ್ಕನನಾಡು ಟಿ.ಎಚ್.ಇಬ್ರಾನ್ ಅವರೊಂದಿಗೆ ನಡೆದಿತ್ತು.ಇಬ್ರಾನ್ ವಧು ನೋಡಲು ಬಂದ ವೇಳೆ, ವರದಕ್ಷಿಣೆ ರಹಿತ ವಿವಾಹವಾಗುವುದಾಗಿ ನಂಬಿಸಿ ವಿವಾಹವಾಗಿ ಬಳಿಕ ವರದಕ್ಷಿಣೆ ಪಡೆದಿದ್ದರು.

ಬಳಿಕ ಪದೇ ಪದೇ ನನಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು.ಈ ಕುರಿತು ನನ್ನ ತವರು ಮನೆಗೆ ತಿಳಿಸಿದ್ದಾಗ ರಾಜಿ ಮಾತುಕತೆ ನಡೆಸಲಾಗಿತ್ತಾದರೂ ಮತ್ತೆ ಮತ್ತೆ ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ತಮಗೆ 2 ಹೆಣ್ಣು ಮತ್ತು ಒಂದು ಗಂಡು ಮಗುವಿದೆ.ಇದೀಗ ಗಂಡ ಇಬ್ರಾನ್, ಅತ್ತಿಗೆಯಂದಿರಾದ ರೇಶ್ಮಾಬಾನು, ಪರ್ವೀಸ್ ಬಾನು, ನಾಸಿಮ, ಇಲಿಯಾಸ್ ಬೇಗ್, ಪರ್ವೀಸ್ ಬಾನು ಅವರ ಮಗ ಫಯಾಜ್ ಪಾಶಾ, ಮನೆ ಮಂದಿ ಸೇರಿಕೊಂಡು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ.

ಜು.21ರಂದು ಹಾಸನದ ಮನೆಯಿಂದ ನನ್ನನ್ನು ದಕ್ಷಿಣಕನ್ನಡದ ಆತೂರು ಮನೆಗೆ ಕಳುಹಿಸಿದ್ದಾರೆ.ಅದೇ ದಿನ ರಾತ್ರಿ ನನ್ನ ಗಂಡ ಆತೂರು ಮನೆಗೆ ಬಂದು ನನಗೆ ಹಲ್ಲೆ ನಡೆಸಿದ್ದಾರೆ ಎಂದು ಸೇಮಿಮಾ ಆರೋಪಿಸಿದ್ದು.ಘಟನೆ ಕುರಿತು ಕಡಬ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಸೇಮಿಮಾ ಅವರು ತಿಳಿಸಿದ್ದಾರೆ.

Leave A Reply

Your email address will not be published.