ಲಾರಿ- ಕಾರು ಭೀಕರ ಅಪಘಾತ| 5 ಜನ ಸ್ಥಳದಲ್ಲೇ ಸಾವು, ಮೂವರು ಗಂಭೀರ

ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದ ದಾರುಣ ಘಟನೆಯೊಂದು ನಡೆದಿದೆ. ಈ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ದುರ್ಮರಣ ಹೊಂದಿದ್ದಾರೆ. ಬರ್ತ್ ಡೇ ಪಾರ್ಟಿ ಮುಗಿಸಿ ಬರುವಾಗ ಈ ಭೀಕರ ದುರ್ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಸಮೀಪ ಟಾಟಾ ಸ್ಕಾರ್ಪಿಯೋಗೆ ಲಾರಿಯೊಂದು ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೊಪ್ಪಳದಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಸ್ಕಾರ್ಪಿಯೋಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರೆಲ್ಲ ಯಲಬುರ್ಗಾ ತಾಲೂಕಿನ ಬಿನ್ನಾಳ ಗ್ರಾಮದ ಒಂದೇ ಕುಟುಂಬಕ್ಕೆ ಸೇರಿದವರು ಎಂದು ತಿಳಿದುಬಂದಿದೆ.

Leave A Reply

Your email address will not be published.