ದಲಿತ ಸಮುದಾಯಕ್ಕಾಗಿ ‘ಶುಭಲಗ್ನ’ ಯೋಜನೆ ಪ್ರಾರಂಭಿಸಿದ ರಾಜ್ಯಸರ್ಕಾರ
![](https://hosakannada.com/wp-content/uploads/2021/08/Marriage-Certificate.jpg)
ಮಂಗಳೂರು : ದಲಿತ ಸಮುದಾಯಕ್ಕೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹೊಸ ಯೋಜನೆಯನ್ನು ಜಾರಿಗೊಳಿಸಲಿದ್ದು, ಶೀಘ್ರದಲ್ಲೇ ಪ್ರಾರಂಭವಾಗಲಿದೆ.
![](https://hosakannada.com/wp-content/uploads/2024/07/First.jpeg)
ಸಪ್ತಪದಿ ಮಾದರಿಯಲ್ಲೇ ‘ಶುಭಲಗ್ನ’ ಹೆಸರಿನಲ್ಲಿ ಉಚಿತ ಸಾಮೂಹಿಕ ವಿವಾಹ ಯೋಜನೆ ಹಮ್ಮಿಕೊಳ್ಳಲು ಚಿಂತನೆ ನಡೆಸಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
![](https://hosakannada.com/wp-content/uploads/2024/07/Middle.jpeg)
ಈಗಾಗಲೇ ರಾಜ್ಯದ ಪ್ರತಿ ಜಿಲ್ಲೆಗಳಿಂದ ಪರಿಶಿಷ್ಟ ಜಾತಿ, ಉಪಜಾತಿಗಳ ಸಮಗ್ರ ವರದಿಯನ್ನು ತರಿಸಿಕೊಂಡಿದ್ದು, ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಇನ್ನು ಮೂರು ತಿಂಗಳಲ್ಲಿ ಶುಭಲಗ್ನ ಘೋಷಣೆ ಆಗಲಿದೆ. ಶುಭಲಗ್ನ ಕಾರ್ಯಕ್ರಮಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ಏರ್ಪಡಿಸಲು ತೀರ್ಮಾನಿಸಲಾಗಿದ್ದು, ಈ ಯೋಜನೆಯಿಂದ ಎಸ್ ಸಿ ಸಮುದಾಯದ ಕುಟುಂಬಗಳಿಗೆ ವಿವಾಹವಾಗಲು ನೆರವಾಗಲಿದೆ.