ಬೆಳ್ಳಾರೆ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ದಿನೇಶ್ ಗುಂಡೂರಾವ್ ತೀವ್ರ ಖಂಡನೆ

ಪುತ್ತೂರು : ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ರಾಜ್ಯವನ್ನೇ ತಲ್ಲಣಗೊಳಿಸಿದೆ. ಈ ಹತ್ಯೆ ಖಂಡಿಸಿ ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಟ್ವೀಟೊಂದನ್ನು ಮಾಡಿದ್ದಾರೆ.

“ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಎಂಬ ಯುವಕನ ಕೊಲೆ ಅತ್ಯಂತ ಹೇಯ ಕೃತ್ಯ. ಕೆಲ ದಿನಗಳ ಹಿಂದೆ ಸುಳ್ಯದಲ್ಲಿ ಅನ್ಯ ಧರ್ಮದ ಯುವಕನ ಕೊಲೆಯಾಗಿತ್ತು. ಆ ಕೊಲೆಗೆ ಪ್ರತಿಕಾರವಾಗಿ ಈ ಕೊಲೆ ನಡೆದ ಶಂಕೆಯಿದೆ. ಇದು ಖಂಡನೀಯ. ಕೊಲೆಗೆ ಕೊಲೆ ಪ್ರತಿಕಾರವಲ್ಲ. ಸರ್ಕಾರ ಹತ್ಯೆ ನಡೆಸಿದ ದುಷ್ಕರ್ಮಿಗಳ ಮಟ್ಟ ಹಾಕಲಿ” ಎಂದು ಟ್ವೀಟ್ ಮಾಡಿದ್ದಾರೆ.

Leave A Reply

Your email address will not be published.