ಗುಡುಗು ಸಹಿತ ಭಾರೀ ಮಳೆಗೆ ಶಾಲೆಗೆ ರಜೆ

ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯ ಉಳ್ಳಾಲ, ಮುಲ್ಕಿ, ಮೂಡಬಿದಿರೆ ಮತ್ತು ಬಂಟ್ವಾಳ ತಾಲೂಕಿನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಗೆ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶನಿವಾರ (30/07/2022) ಮಂಗಳೂರು ಉಪ ವಿಭಾಗದಾದ್ಯಂತ ರಜೆ ಘೋಷಿಸಲಾಗಿದೆ.

ಆದರೆ ಕಾಲೇಜುಗಳಿಗೆ ರಜೆ ಇರೋದಿಲ್ಲ. ಪ್ರೌಢಶಾಲೆ ಮೇಲ್ಪಟ್ಟ ಎಲ್ಲಾ ವಿದ್ಯಾಸಂಸ್ಥೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗಗಳಿಗೆ ರಜೆ ನೀಡಲಾಗಿದೆ.

(ಮಂಗಳೂರು ನಗರ ಪಾಲಿಕೆ, ಮುಲ್ಕಿ, ಮೂಡಬಿದಿರೆ, ಉಳ್ಳಾಲ ಮತ್ತು ಬಂಟ್ವಾಳ ತಾಲೂಕು) ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಪುತ್ತೂರು ತಾಲೂಕಿನಲ್ಲಿಯೂ ಶಾಲೆಗಳಿಗೆ ರಜೆ ನೀಡಲಾಗಿದೆ.

Leave A Reply

Your email address will not be published.