ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್, ಮತ್ತೆ ಇ-ಕೆವೈಸಿ ಪ್ರಾರಂಭ

ಪಡಿತರ ಚೀಟಿ ಕುಟುಂಬದ ಸದಸ್ಯರುಗಳ ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದ್ದು, ಇದೀಗ ಮತ್ತೊಮ್ಮೆ ಸರ್ಕಾರ ಕೊನೆ ಅವಕಾಶ ಕಲ್ಪಿಸಿದೆ. ಪ್ರಸ್ತುತ ಸರ್ಕಾರದ ಆದೇಶದಂತೆ ಇ-ಕೆವೈಸಿ ಕಾರ್ಯವನ್ನು ಮತ್ತೆ ಪ್ರಾರಂಭಿಸಲಾಗಿದೆ.

ಇ-ಕೈವೈಸಿ ಮಾಡಿಸಿರದ ಅಂತ್ಯೋದಯ ಅನ್ನಯೋಜನೆ, ಬಿಪಿಎಲ್ ಮತ್ತು ಎಪಿಎಲ್ ಸೇರ್ಪಡೆಗೊಂಡಿರುವ ಸದಸ್ಯರು ಕೂಡಲೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗೆ ತೆರಳಿ ತಮ್ಮ ಬೆರಳಚ್ಚನ್ನು ನೀಡಿ ಇ-ಕೆವೈಸಿಯನ್ನು ಮಾಡಿಸಲು ಕೋರಿದ್ದು, ಎಎವೈ, ಆದ್ಯತಾ, ಆದ್ಯತೇತರ ಪಡಿತರ ಚೀಟಿಗಳಲ್ಲಿ ಸೇರ್ಪಡೆಗೊಂಡಿರುವ ಎಲ್ಲಾ ಸದಸ್ಯರು ಈ ರೀತಿ ಇ-ಕೆವೈಸಿಯನ್ನು ಮಾಡಿಸುವುದು ಕಡ್ಡಾಯವಾಗಿದೆ.

ಉದ್ಯೋಗ/ ವಿಧ್ಯಾಭ್ಯಾಸದ ಸಲುವಾಗಿ ಹಾಗೂ ಇತರೆ ಕಾರಣಗಳಿಂದ ಜಿಲ್ಲೆಯಿಂದ ಹೊರಗೆ ನೆಲೆಸಿರುವ ಪಡಿತರ ಚೀಟಿ ಸದಸ್ಯರು ಅವರು ನೆಲೆಸಿರುವ ವ್ಯಾಪ್ತಿಯಲ್ಲಿರುವ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ (ಜೀವ ಮಾಪಕ ಮರು ದೃಡೀಕರಣ) ಮಾಡಿಸಬೇಕು. 6 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್ ಮಾಡಿಸಿದ್ದಲ್ಲಿ ಅಂತಹ ಮಕ್ಕಳ ಬೆರಳಚ್ಚು ಅಪ್‍ಡೇಟ್ ಆಗಿರುವುದಿಲ್ಲ. ಇದರಿಂದಾಗಿ ಇ-ಕೆಎವೈಸಿ ಮಾಡಿಸಲು ಸಾದ್ಯವಾಗುವುದಿಲ್ಲ. ಆದ್ದರಿಂದ ಬೆರಳಚ್ಚು ಅಪ್‍ಡೇಟ್ ಆಗದಂತಹ ಮಕ್ಕಳನ್ನು ಆಧಾರ್ ಸೆಂಟರ್ ನಲ್ಲಿ ಬೆರಳಚ್ಚು ಅಪ್‍ಡೇಟ್ ಮಾಡಬೇಕು. ನಂತರವೇ ಪಡಿತರ ಚೀಟಿಯ ಇ-ಕೆವೈಸಿ ಮಾಡಿಸುವುದು.

ಈ ರೀತಿ ಬೆರಳಚ್ಚು ನೀಡಿ ಇ-ಕೆವೈಸಿ ಮಾಡಿಸಲು ಯಾವುದೇ ಶುಲ್ಕ ಇರುವುದಿಲ್ಲ. ಪಡಿತರ ಚೀಟಿದಾರರು ಯಾವುದೇ ಹಣ ನೀಡುವಂತಿಲ್ಲ. ಹಣ ತೆಗೆದುಕೊಂಡಲ್ಲಿ ತಾಲ್ಲೂಕು ಆಹಾರ ಕಚೇರಿ/ ಉಪ ನಿರ್ದೇಶಕರ ಕಚೇರಿಗೆ ದೂರು ನೀಡಬಹುದು. ಆದ್ದರಿಂದ ಜಿಲ್ಲೆಯ ಎಲ್ಲಾ ವರ್ಗದ ಪಡಿತರ ಚೀಟಿಗಳ ಕುಟುಂಬದ ಸದಸ್ಯರುಗಳು ಕಡ್ಡಾಯವಾಗಿ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗೆ ತೆರಳಿ ಬೆರಳಚ್ಚನ್ನು ನೀಡಿ ಇ-ಕೈವೈಸಿ ಕಾರ್ಯವನ್ನು ಮಾಡಲು ಕೋರಿದೆ.

Leave A Reply

Your email address will not be published.