ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳೇ ನಿಮಗೊಂದು ಗುಡ್ ನ್ಯೂಸ್ |

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡಿದ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ ದೃಢೀಕೃತ ದಾಖಲಾತಿ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಹಿಂದಿನ ತರಗತಿಯ ವ್ಯಾಸಂಗ ಪ್ರಮಾಣ ಪತ್ರ/ಅಂಕಪಟ್ಟಿ, ಚಾಲ್ತಿಯಲ್ಲಿರುವ ವಿದ್ಯಾರ್ಥಿಗಳ ವೈಯಕ್ತಿಕ ಬ್ಯಾಂಕ್ ಖಾತೆಯ ವಿವರ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬಳಿ ಇರುವ ಜಿಲ್ಲಾಡಳಿತ ಭವನದಲ್ಲಿರುವ ಕೊಠಡಿ ಸಂಖ್ಯೆ: 217, 2ನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸುವುದು.

ಆಸಕ್ತರು ಅರ್ಜಿಯನ್ನು ಸಮಾಜ ಕಲ್ಯಾಣ ವೆಬ್‌ಸೈಟ್: www.sw.kar.nic.in ಮೂಲಕ 2022ರ ಅಕ್ಟೋಬರ್ 31 ರೊಳಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ದೂ.ಸಂ.: 080-29787447, ಸಹಾಯಕ ನಿರ್ದೇಶಕರು, ದೇವನಹಳ್ಳಿ, ದೂ.ಸಂ.: 080-7681784, ದೊಡ್ಡಬಳ್ಳಾಪುರ, ದೂ.ಸಂ.: 080-7623681, ಹೊಸಕೋಟೆ : ದೂ.ಸಂ. 080 7931528 ಹಾಗೂ ನೆಲಮಂಗಲ, ದೂ.ಸಂ.: 080 7723172ಗೆ ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರಾದ ಕೃಷ್ಣಪ್ಪ.ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave A Reply

Your email address will not be published.