ಮಂಗಳೂರು : ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿಗೆ ಯತ್ನ ?
![](https://hosakannada.com/wp-content/uploads/2022/08/IMG-20220803-WA0015.jpg)
ಮಂಗಳೂರು : ಮತ್ತೆ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿಗೆ ಯತ್ನ ನಡೆದಿದೆ. ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳನ್ನು ಹಿಡಿದಿದ್ದ ಮೂವರ ತಂಡ ದಾಳಿಗೆ ಯತ್ನಿಸಿದ ಘಟನೆ ನಡೆದಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ.
![](https://hosakannada.com/wp-content/uploads/2024/07/First.jpeg)
ಆ.3ರಂದು ಉಚ್ಚಿಲ ಮುಳ್ಳುಗಡ್ಡೆ ಎಂಬಲ್ಲಿ ನಡೆದಿದೆ. ಉಚ್ಚಿಲ ಜಾಲ ಹಿತ್ತಿಲು ನಿವಾಸಿ ಕಿಶೋರ್ ಸಾಲ್ಯಾನ್ (49) ಎಂಬವರ ಮೇಲೆ ದಾಳಿಗೆ ಯತ್ನ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
![](https://hosakannada.com/wp-content/uploads/2024/07/Middle.jpeg)
ಘಟನೆಯು ಇಂದು ಬೆಳಿಗ್ಗೆ 7.30 ಗಂಟೆ ವೇಳೆಗೆ ನಡೆದಿದೆ ಸುದ್ದಿ ಬಂದಿದೆ. ಕಿಶೋರ್ ಅವರು ವೃತ್ತಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಕೂಲಿ ಕೆಲಸಕ್ಕೆ ಹೊರಟು ಹೋಗುತ್ತಿದ್ದ ಸಮಯದಲ್ಲಿ ಮೂವರು ಆಗಂತುಕರು ಮಾರಕಾಸ್ತ್ರಗಳಿಂದ ದಾಳಿಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಕಿಶೋರ್ ಅವರು ಮನೆಯಲ್ಲಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
1 Comment
I like this web site very much, Its a really nice situation to read and obtain information.Raise blog range