ವರುಣನಾರ್ಭಟ : ಈ ಜಿಲ್ಲೆಯ ಶಾಲೆಗೆ ನಾಳೆ ರಜೆ!

ಮಡಿಕೇರಿ: ರಾಜ್ಯದಲ್ಲಿ ಮುಂಗಾರು ಮಳೆ ಹೆಚ್ಚಾಗಿದೆ. ಜನ ಮಳೆಗಾಳಿಯಿಂದ ತತ್ತರಿಸಿ ಹೋಗಿದ್ದಾರೆ. ಎಲ್ಲಾ ಕಡೆ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡುತ್ತಿದೆ. ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ.

ಕೆರೆ, ಹಳ್ಳ ಎಲ್ಲ ತುಂಬಿ ಉಕ್ಕಿ ಹರಿಯುತ್ತಿದ್ದು, ಬೆಳೆಯೆಲ್ಲ ಜಲಾವೃತಗೊಂಡಿದೆ. ಹೀಗಾಗಿ ರೈತರು ಕಂಗಾಲು ಹೋಗಿದ್ದಾರೆ. ಅದರಲ್ಲೂ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಶಾಲೆಗಳಿಗೆ ಡಿಡಿಪಿಐ ರಜೆ ಘೋಷಣೆ ಮಾಡಿದ್ದಾರೆ. ನಾಳೆ ಬೆಳಗ್ಗೆ 8.30 ರವರೆಗೆ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿರ್ದೇಶನದಂತೆ ಡಿಡಿಪಿಐ ವೇದಮೂರ್ತಿ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.

Leave A Reply

Your email address will not be published.