ವಿಟ್ಲ : ತೀವ್ರ ಹದಗೆಟ್ಟ ಬಿಲ್ಲಂಪದವು-ನೆಗಳಗುಳಿ ಶಾಲಾ ರಸ್ತೆ !

ವಿಟ್ಲ:- ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಬಿಲ್ಲಂಪದವು – ನೆಗಳಗುಳಿ ಶಾಲಾ ರಸ್ತೆಯು ತೀವ್ರ ಹದಗೆಟ್ಟಿತ್ತು.
ರಸ್ತೆಯು ಅಲ್ಲಲ್ಲಿ ಕೆಟ್ಟು ಹೋದುದರಿಂದ ತುರ್ತು ಸಂದರ್ಭದಲ್ಲಿ ಯಾವುದೇ ವಾಹನದವರು ಈ ಬಾಗಕ್ಕೆ ಬರದಿರುವುದಿಂದ ತೊಂದರೆಯನ್ನು ಅನುಭವಿಸುತ್ತಿದ್ದಾರೆ.ಸುಮಾರು 50 ಮನೆಯವರಿಗೆ ಸಂಪರ್ಕದ ಏಕೈಕ ರಸ್ತೆ ಇದಾಗಿದ್ದು ಎಲ್ಲ ಜನರು ಈ ರಸ್ತೆಯನ್ನು ಅವಲಂಬಿಸುವಂತಾಗಿದೆ. ಮಳೆಗಾಲದಲ್ಲಿ ಅಗತ್ಯ ವಸ್ತುಗಳನ್ನು ತಲೆಯಲ್ಲಿ ಹೊತ್ತು ಕೊಂಡು ಹೋಗುವ ಪರಿಸ್ಥಿತಿ ಈ ಉೂರಿನವರದ್ದಾಗಿದೆ
ಈ ರಸ್ತೆಗೆ ಯಾವುದೇ ಅನುದಾನ ಬರದ ಕಾರಣ ನೆಗಳಗುಳಿಯ ಯುವಕ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಈ ರಸ್ತೆಯ ಸ್ಥಿತಿಗತಿಯ ಬಗ್ಗೆ ತಿಳಿಸಿ ಅನುದಾನ ಬಿಡುಗಡೆಗೊಳಿಸುವಂತೆ ಕೋರಿ ಮನವಿ ಮಾಡಿದರು, ಈ ಮನವಿಯನ್ನು ಸ್ವೀಕರಿಸಿದ ಪ್ರಧಾನಮಂತ್ರಿ ಕಾರ್ಯಾಲಯವು ಜಿಲ್ಲಾ ಪಂಚಾಯತ್ ಮಂಗಳೂರಿಗೆ ಈ ರಸ್ತೆಯನ್ನು ತಕ್ಷಣ ಪರಿಶೀಲಿಸಿ ತಕ್ಷಣ ಕ್ರಮಕೈಗೊಳ್ಳಲು ವರದಿಯನ್ನು ನೀಡಿತು. ಈ ಮನವಿಯನ್ನು ಸ್ವೀಕರಿಸಿದ ಜಿಲ್ಲಾ ಪಂಚಾಯತ್ ಮಂಗಳೂರು,ಅಳಿಕೆ ಗ್ರಾಮ ಪಂಚಾಯತ್ ಗೆ ಈ ರಸ್ತೆಯನ್ನು ಪರಿಶೀಲಿಸಿ ಕ್ರಮ ಕೆಗೊಳ್ಳಲು ತಿಳಿಸಿತು, ಆದರೆ ಈ ರಸ್ತೆಗೆ ಅಭಿವ್ರದ್ಧಿ ಗೆ ತಮ್ಮಲ್ಲಿ ಬೇಕಾದ ಅನುದಾನ ವಿಲ್ಲ ಎಂದು ತಿಳಿಸಿತು.ಜಿಲ್ಲಾ ಪಂಚಾಯತ್ ಇಂಜಿನಿಯರ್ ವಿಭಾಗ ಮಂಗಳೂರು ಈ ರಸ್ತೆಯು 1.50ಕಿ.ಮೀ ಉದ್ದ ವಿದ್ದು ಇದಕ್ಕಾಗಿ ಅಂದಾಜು 105 ಲಕ್ಷ ವೆಚ್ಚವಾಗುತ್ತದೆ ಈ ಕಡತವನ್ನು ಜಿಲ್ಲಾ ಪಂಚಾಯತ್ ಮಂಗಳೂರಿಗೆ ಕಳುಹಿಸಲಾಗಿದೆ. ರಸ್ತೆ ದುರಸ್ತಿಗೆ ಬೇಕಾದ ಈ ಮೊತ್ತ ತಮ್ಮಲ್ಲಿ ಇಲ್ಲ ಹಾಗೂ ಈ ಕಡತವನ್ನು ಕರ್ನಾಟಕ ಸರಕಾರಕ್ಕೆ ಕಲುಹುಸಲಾಗಿದೆ ಎಂದು ತಿಳಿಸಿದರು. 2017 ರಲ್ಲಿ ಈ ರಸ್ತೆ ದುರಸ್ತಿಯ ಬಗ್ಗೆ ತಯಾರಾದ ಕರ್ಣಾಟಕ ಸರಕಾರದ ಕಡತ(RRC 278) ವಿಧಾನ ಸೌದದಲ್ಲಿ ಇದ್ದು ಈ ರಸ್ತೆ ದುರಸ್ಥಿಯ ಕಡತದ ದ ಬಗ್ಗೆ ಸ್ಥಳೀಯ ಶಾಸಕರಲ್ಲಿ ಹಲವು ಬಾರಿ ಮನವಿ ಮಾಡಿದರೂ ಯಾವುದು ಫಲ ಕಾಣಲಿಲ್ಲ.ಶಾಸಕರು ಕೇವಲ 50 ಸಾವಿರದ ಅನುದಾನವನ್ನು ಒದಗಿಸಿ ಕೇವಲ 50 ಮೀಟರ್ ಕಾಂಕ್ರಿಟ್ ಮಾಡಿಸಿ,ಊರಿನವರ ಬಾಯಿ ಮುಚ್ಚಲು ಹೊರಟಿದ್ದಾರೆ,ಊರಿನ ನಾಗರಿಕರು ಈ ರಸ್ತೆಯ ದುರಸ್ಥಿಯುು ತಕ್ಷಣ ಆಗಬೇಕೆಂದು ಒಂದು ನೆಗಳಗುಳಿ ರಸ್ತೆ ಹಿತರಕ್ಷಣಾ ವೇದಿಕೆಯನ್ನು ಮಾಡಿಕೊಂಡು ಈ ರಸ್ತೆಯ ಅಭಿವೃದ್ಧಿ ಯು ತಕ್ಷಣ ಆಗದಿದ್ದರೆ ಮುಂದಿನ ಚುನಾವಣೆ ಬಹಿಷ್ಕಾರ ಹಾಗೂ ಉಗ್ರ ಹೋರಾಟದ ಎಚ್ಚರಿಕೆ ಮಾಡಲು ಮುಂದಾಗಿದ್ದಾರೆ.

ಕಳೆದ 6 ವರ್ಷಗಳಿಂದ ಈ ರಸ್ತೆ ದುರಸ್ತಿಯ ಬಗ್ಗೆ ಬೇಡಿಕೆಯನ್ನು ಇಡಲಾಗಿದೆ,ಸತತ ಮನವಿಯನ್ನೂ ನೀಡಿದ್ದೇವೆ. ಆದರೆ ನಮ್ಮ ಕೂಗನ್ನು ಯಾರೂ ಹೇಳುತ್ತಿಲ್ಲ.ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ, ಜನಪ್ರತಿನಿಧಿಗಳಿಗೆ, ಸರಕಾರಿ ಇಲಾಖೆಗಳಿಗೆ ಮನವಿ ನೀಡಿ ಸಾಕಾಗಿದೆ ಅಲ್ಲದೆ ಯಾವುದೇ ಪ್ರಯೋಜನ ಆಗಲಿಲ್ಲ. ಅಭಿವೃದ್ಧಿ ಕಾಣದ ಬಿಲ್ಲಂಪದವು – ನೆಗಳಗುಳಿ ರಸ್ತೆಯನ್ನು ಈ ಬಾರಿ ಅಭಿವೃದ್ಧಿ ಪಡಿಸಲು ಅನುದಾನ ಮಂಜೂರು ಮಾಡದಿದ್ದರೆ, ಮುಂದಿನ 2024 ರ ಚುನಾವಣೆಯನ್ನು ಬಹಿಷ್ಕರಿಸಿ,ಉಗ್ರ ಹೋರಾಟ ಮಾಡುತ್ತೇವೆ. ಯಾವುದೇ ಕಾರಣಕ್ಕೂ ನಾವು ಈ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮಗೆ ರಸ್ತೆಯ ದುರಸ್ಥಿಯೇ ಮುಖ್ಯವಾಗಿದೆ. ದಿನಂಪ್ರತಿ ಈ ಹದಗೆಟ್ಟ ರಸ್ತೆಯಲ್ಲಿ ಸಂಚರಿಸುವುದೇ ನಮಗೆ ಒಂದು ದೊಡ್ಡ ಸವಾಲಾಗಿದೆ. ಡಿ ಹಿನ್ನಲೆಯಲ್ಲಿ ಮುಂದಿನ ದಿನಗಳಲ್ಲಿ ನೆಗಳಗುಳಿ ನಾಗರಿಕರು ಒಟ್ಟು ಸೇರಿ ಹೋರಾಟದ ಬಗ್ಗೆ ರೂಪುರೇಷೆ ಸಿದ್ದಪಡಿಸುತ್ತಿದ್ದೇವೆ.
ರಮೇಶ ನೆಗಳಗುಳಿ

1 Comment
  1. najlepszy sklep says

    Wow, awesome weblog layout! How long have you been running a blog for?

    you make running a blog look easy. The whole glance of your web site is fantastic, let alone the content material!

    You can see similar here e-commerce

Leave A Reply

Your email address will not be published.