ಮೊಹರಂ ಹಬ್ಬದ ಸಂದರ್ಭದಲ್ಲಿ ಯುವಕರಿಬ್ಬರಿಗೆ ಚಾಕು ಇರಿತ | ಓರ್ವನ ಸ್ಥಿತಿ ಗಂಭೀರ!!!

ಮೊಹರಂ ಹಬ್ಬ ಆಚರಣೆ ವೇಳೆ ಯುವಕರಿಬ್ಬರಿಗೆ ಚಾಕು ಇರಿದ ಘಟನೆ ಗದಗ ತಾಲ್ಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ನಡೆದಿದೆ.

ನಾಡಿನಾದ್ಯಂತ ಮೊಹರಂ ಹಬ್ಬ ಆಚರಣೆ ವೇಳೆ ಯುವಕರಿಬ್ಬರಿಗೆ ಚಾಕು ಇರಿದ ಘಟನೆ ಗದಗ ತಾಲ್ಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ನಡೆದಿದೆ.

ದಾದಾಪೀರ್ ಹೊಸಮನಿ (23 ವರ್ಷ) ಮುಸ್ತಾಕ್ ಹೊಸಮನಿ ( 24 ವರ್ಷ) ಎಂಬುವರಿಗೆ ಚೂರಿ ಹಾಕಲಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಇನ್ನೊಬ್ಬನಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊಹರಂ ಹಬ್ಬ ಆಚರಣೆ ವೇಳೆ ಕಾಲು ತುಳಿದಿದ್ದಕ್ಕೆ ಚಾಕು ಇರಿಯಲಾಗಿದೆ ಎಂದು ಆರೋಪಿಸಲಾಗಿದೆ. ಸೋಮು ಗುಡಿ ಎಂಬಾತ ಸೇರಿ ಹಲವರಿಂದ ಚಾಕೂ ಇರಿಯಲಾಗಿದೆ ಎಂದು ಆರೋಪಿಸಲಾಗಿದೆ. ಗಾಯಾಳು ದಾದಾಪೀರ್ ನನ್ನು ವೈದ್ಯರು ಶಸ್ತ್ರಚಿಕಿತ್ಸೆಗೆ ಕರೆದೊಯ್ದಿದ್ದಾರೆ.

ಎಸ್ಪಿ ದೇವರಾಜು, ಡಿವೈಎಸ್ಪಿ ಶಿವಾನಂದ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಸೋಮು, ಯಲ್ಲಪ್ಪ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಮಲ್ಲಸಮುದ್ರ ಗ್ರಾಮದಲ್ಲಿ ಗದಗ ಎಸ್ಪಿ ಶಿವಪ್ರಕಾಶ್ ಹೇಳಿದ್ದಾರೆ.

ಓರ್ವನ ಸ್ಥಿತಿ ಗಂಭೀರವಾಗಿದ್ದು, ಆತನ ಉಳಿಸಿಕೊಳ್ಳಲು ಪ್ರಯತ್ನ ವೈದ್ಯರು ನಡೆಸಿದ್ದಾರೆ. ಮಲ್ಲಸಮುದ್ರ ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಟೈಟ್ ಸೆಕ್ಯೂರಿಟಿ ಮಾಡಲಾಗಿದೆ. ಎರಡು ಡಿಆರ್ ತುಕಡಿ ಹಾಗೂ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

Leave A Reply

Your email address will not be published.