ಭಾರೀ ಮಳೆಯ ಕಾರಣ ಈ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ

ರಾಜ್ಯದಾದ್ಯಂತ ವರುಣಾರ್ಭಟ ಹೆಚ್ಚಾಗಿದೆ. ಜನಜೀವನ ಅಸ್ತವ್ಯಸ್ತ್ಯಗೊಂಡಿದೆ. ಅಲ್ಲಲ್ಲಿ ಅಪಾರ ಹಾನಿ ಉಂಟಾಗಿದೆ. ಜನರು ಮಂದೇನಾಗುತ್ತೆ ಅನ್ನೋ ಭಯದಲ್ಲಿದ್ದಾರೆ. ಶಾಲಾ ಮಕ್ಕಳು ಈ ಕೂಡಾ ಈ ಭಾರೀ ಮಳೆಯಿಂದ ತತ್ತರಿಸಿ ಹೋಗಿದ್ದಾರೆ. ಈ ಭಾರಿ ಮಳೆ ಹಿನ್ನೆಲೆಯಲ್ಲಿ ತಾಲೂಕಿನ ಈ ಮೂರು ಹೋಬಳಿಯ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲಾಧಿಕಾರಿಗಳು ಇವರ ಸೂಚನೆ ಮೇರೆಗೆ ನಗರ, ಕಸಬಾ ಮತ್ತು ಹುಂಚ ಹೋಬಳಿಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಅಲ್ಲದೇ ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಶಾಲೆಗಳಿಗೆ ಮಳೆಯ ಪ್ರಮಾಣವನ್ನು ಆಧರಿಸಿ ರಜೆ ನೀಡುವ ಅಧಿಕಾರವನ್ನು ಮುಖ್ಯಶಿಕ್ಷಕರು ಮತ್ತುಎಸ್ ಡಿ ಎಂ ಸಿ ಅವರಿಗೆ ನೀಡಿದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.

Leave A Reply

Your email address will not be published.