ಭಾರೀ ಮಳೆ: ಈ ಶಾಲೆಗಳಿಗೆ ರಜೆ ಘೋಷಣೆ !!

ಮಂಡ್ಯ ಜಿಲ್ಲೆಯಲ್ಲಿ ಮುಂಜಾನೆಯಿಂದ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಮುಂಜಾಗೃತ ಕ್ರಮವಾಗಿ ಎಂದು ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಮಕ್ಕಳು, ಅಂಗನವಾಡಿ ಮಕ್ಕಳು, ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ (1 ರಿಂದ 10ತರಗತಿ ವರೆಗೆ ) ಸೋಮವಾರ ರಜೆ ಘೋಷಿಸಲಾಗಿದೆ.

ಮಾರ್ಗ ಬದಲಾವಣೆ: ರಾಮನಗರದಲ್ಲಿ ಅತಿ ಹೆಚ್ಚು ಮಳೆ ಸುರಿದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನೀರು ನಿಂತಿರುವುದರಿಂದ ಹೆದ್ದಾರಿ ಬಂದ್ ಆಗಿದೆ. ಆದ್ದರಿಂದ ಮದ್ದೂರಿನ ಅಡಿಗಾಸ್ ಹೋಟೆಲ್ ಬಳಿ ಸಂಚಾರಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿ

ಹುಲಿಯೂರುದುರ್ಗದ ಮೂಲಕ ಮಾಗಡಿ ಮಾರ್ಗವಾಗಿ ಬೆಂಗಳೂರಿಗೆ ತೆರಳುವಂತೆ ಮಾರ್ಗ ಬದಲಿಸಲಾಗಿದೆ.

Leave A Reply

Your email address will not be published.