ಪ್ರಕೃತಿ ವಿಕೋಪಗಳು ಕಾರ್ತಿಕ ಮಾಸದಲ್ಲಿ ಹೆಚ್ಚಾಗಲಿವೆ: ಕೋಡಿಹಳ್ಳಿ ಶ್ರೀ ಭವಿಷ್ಯ

ಕೋಡಿಹಳ್ಳಿ ಮಠದ ಶಿವಯೋಗಿ ರಾಜೇಂದ್ರ ಸ್ವಾಮಿಜೀಗಳು ಕಾರ್ತಿಕ ಮಾಸದಲ್ಲಿ ಪ್ರಕೃತಿ ವಿಕೋಪ ಹೆಚ್ಚಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಅವರು ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ಮಾತನ್ನು ಹೇಳಿದ್ದಾರೆ.

ಶಿವಮೊಗ್ಗ ತಾಲೂಕು ಕುಂಚೇನಹಳ್ಳಿ ತಾಂಡಾದ ಐಯ್ಯನವರ ಕೆರೆಗೆ ಬಾಗಿನ ಅರ್ಪಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ಮಾತನ್ನು ಹೇಳಿದ್ದಾರೆ.

ಹಿರಿಯರು ಕಟ್ಟಿಸಿರುವ ಅಯ್ಯನಕೆರೆ ಮಳೆಯಿಂದಾಗಿ ತುಂಬಿರುವುದು ಹರ್ಷ ತಂದಿದೆ. ಮಳೆ ಹೆಚ್ಚಾಗಿರುವುದರಿಂದ ಬಹಳ ವರ್ಷಗಳ ಬಳಿಕ ಈ ಕೆರೆ ತುಂಬಿರುವುದು ಸಂತೋಷ ತಂದಿದೆ. ಇದು ಈ ಭಾಗದ ಜನರಿಗೆ ಅನುಕೂಲವಾಗುತ್ತೆ. ಮುಂದಿನ ದಿನಗಳಲ್ಲಿ ನೀರಿನಿಂದ ಅನಾಹುತವಾಗಲಿದೆ ಎಂಬ ಮಾತನ್ನು ಹೇಳಿದ್ದಾರೆ.

ಕಾರ್ತಿಕ ಮಾಸದಲ್ಲಿ ಅವಘಡ ಹೆಚ್ಚು: ಕಾರ್ತಿಕ ಮಾಸದಲ್ಲಿ ನೀರಿನಿಂದ ಜಲಗಂಡಾಂತರವಿದೆ. ಭೂಮಿ ನಡುಗುತ್ತೆ. ಬೆಂಕಿ ಅನಾಹುತಗಳು ಹೆಚ್ಚಾಗುತ್ತೆ ಎಂದು ಭವಿಷ್ಯ ನುಡಿದಿದ್ದಾರೆ. ಜನರು ಸಾಕಷ್ಟು ಸಮಸ್ಯೆಗೆ ಒಳಗಾಗುತ್ತಾರೆ. ಹೆಚ್ಚು ಹೆಚ್ಚು ಪೂಜೆ ನಡೆಸುವುದರಿಂದ ಅನಾಹುತಗಳನ್ನು ತಪ್ಪಿಸಬಹುದು ಎಂದು ಭವಿಷ್ಯ ನುಡಿದಿದ್ದಾರೆ ಸ್ವಾಮೀಜಿಗಳು.

Leave A Reply

Your email address will not be published.