ಸ್ಕೂಟಿ-ಟ್ಯಾಂಕರ್ ಮಧ್ಯೆ ಭೀಕರ ಅಪಘಾತ-ಮಹಿಳೆ ಸ್ಥಳದಲ್ಲೇ ಸಾವು!!

ಬೆಂಗಳೂರು: ಸ್ಕೂಟಿ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ ಕುಂದಾಪುರ ಬೈಂದೂರು ಸಮೀಪದ ಮಹಿಳೆಯೊಬ್ಬರು ಮೃತಪಟ್ಟ ಘಟನೆಯೊಂದು ನಡೆದಿದೆ.

ಮೃತ ಮಹಿಳೆಯನ್ನು ಬೆಂಗಳೂರಿನ ಅಂಚೆ ಕಚೇರಿಯೊಂದರ ಸಿಬ್ಬಂದಿ, ಪ್ರೇಮ ಪೂಜಾರಿ(35) ಎಂದು ಗುರುತಿಸಲಾಗಿದೆ.

ಮಹಿಳೆಯು ಕಳೆದ ಎರಡು ವರ್ಷಗಳ ಹಿಂದಷ್ಟೇ ವಿವಾಹವಾಗಿದ್ದು, ಆ ಬಳಿಕ ಪತಿಯೊಂದಿಗೆ ಬೆಂಗಳೂರಿನಲ್ಲೇ ನೆಲೆಸಿದ್ದರು ಎನ್ನಲಾಗಿದೆ.ತನ್ನ ಪತಿಗೆ ಸಹಕರಿಸಲು ಎಂದು ಹೊರಗೆ ತೆರಳಿದ್ದ ವೇಳೆ ಮಹಿಳೆ ಸಂಚರಿಸುತ್ತಿದ್ದ ಸ್ಕೂಟಿಗೆ ಯಲಹಂಕ ಬಳಿ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Leave A Reply

Your email address will not be published.