ಕರಾವಳಿ ಸೇರಿದಂತೆ ಇತರ ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರಕ್ಕೆ ಗುಪ್ತಚರ ಇಲಾಖೆ ಸೂಚನೆ | ಹಿಂದೂ ಕಾರ್ಯಕರ್ತರಿಗೆ ಹೈ ಅಲರ್ಟ್ಗೆ ಸೂಚನೆ
![](https://hosakannada.com/wp-content/uploads/2022/09/IMG_20220922_192749.jpg)
ಮಂಗಳೂರು : ಕರಾವಳಿ ಸೇರಿದಂತೆ ಇತರ ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಗುಪ್ತಚರ ಇಲಾಖೆ ಸೂಚನೆ ನೀಡಿದೆ. ಸಂಘಪರಿವಾರದ ಮುಖಂಡರು ಹಾಗೂ ಹಿಂದೂ ಕಾರ್ಯಕರ್ತರಿಗೆ ಅಲರ್ಟ್ ಇರುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.
![](https://hosakannada.com/wp-content/uploads/2024/07/First.jpeg)
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಮಂದಿಯನ್ನು ಎನ್ಐಎ ಹಾಗೂ ಪೊಲೀಸರು ವಶಕ್ಕೆ ಪಡೆದಿದ್ದು ಗಲಭೆ ಸಾಧ್ಯತೆಯ ಮುನ್ನೆಚ್ಚರಿಕೆಯಾಗಿ ಅಲರ್ಟ್ ಇರುವಂತೆ ಗುಪ್ತಚರ ಇಲಾಖೆ ರಾಜ್ಯ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದೆ.
![](https://hosakannada.com/wp-content/uploads/2024/07/Middle.jpeg)
ಹಿಂದೂ ಸಂಘಟನೆಯ ಪ್ರಮುಖರು, ಹಿಂದೂ ಕಾರ್ಯಕರ್ತರಿಗೆ ಸಂದೇಶ ರವಾನಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಸೇರಿದಂತೆ ಕೆಲವೊಂದು ಸೂಕ್ಷ್ಮ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆಯಕಟ್ಟಿನ ಪ್ರದೇಶಲ್ಲಿ ನಾಕಾಬಂಧಿ ಅಳವಡಿಸಲಾಗಿದೆ.