ದಕ್ಷಿಣ ಕನ್ನಡ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ಸೇವಾದರ ಹೆಚ್ಚಳ

ದಕ್ಷಿಣ ಕನ್ನಡ: ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವೂ ( Kukke Subramanya Temple ) ಒಂದು. ಸರ್ಪಸಂಸ್ಕಾರಕ್ಕೆ ಬಹಳ ಪ್ರಸಿದ್ಧಿ ಪಡೆದ ಈ ಈ ದೇವಸ್ಥಾನಕ್ಕೆ ಅನೇಕ ಭಕ್ತರು ಸಾಗರೋಪಾದಿಯಲ್ಲಿ ಬರುತ್ತಾರೆ. ಆದೇ ಈಗ ಈ ಸರ್ಪ ಸಂಸ್ಕಾರ ಸೇವಾ ದರವನ್ನು ( Kukke Subramanya Temple Sarpa Samskara) ಹೆಚ್ಚಳ ಮಾಡಿದೆ. ಇದು ನಿಜಕ್ಕೂ ಭಕ್ತಾಧಿಗಳಿಗೆ ಬಿಗ್ ಶಾಕ್ ಸುದ್ದಿ ಎಂದೇ ಹೇಳಬಹುದು.

ಕುಕ್ಕೆ ಶ್ರೀ ಸಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಸೇವೆಗಳಲ್ಲಿ ಒಂದಾಗಿರುವಂತ ಸರ್ಪ ಸಂಸ್ಕಾರ ಸೇವಾ ದರವನ್ನು ಇದೀಗ ಪರಿಷ್ಕರಿಸಲಾಗಿದೆ. ಪರಿಷ್ಕೃತ ದರದಂತೆ ಈ ಹಿಂದಿನ ದರಕ್ಕಿಂತ ದರವನ್ನು ಭಾರೀ ಹೆಚ್ಚಳ ಮಾಡಲಾಗಿದೆ.

ಈ ಮೊದಲು 3,200 ಇದ್ದಂತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಸೇವೆಗಳಲ್ಲಿ ಒಂದಾಗಿರುವಂತ ಸರ್ಪ ಸಂಸ್ಕಾರ ಸೇವೆಯ ದರವನ್ನು 4,200ಕ್ಕೆ ಹೆಚ್ಚಿಸಲಾಗಿದೆ. ಈ ಮೂಲಕ ಸರ್ಪ ಸಂಸ್ಕಾರ ದರದಲ್ಲಿ ಒಂದು ಸಾವಿರ ಹೆಚ್ಚಿಸಲಾಗಿದೆ.

ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆಯ ದೇವಳದಿಂದ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಲಾಗಿದೆ. ಹೀಗಾಗಿ ಸರ್ಪ ದೋಷ ನಿವಾರಣೆಗೆ ತೆರಳುವಂತ ಭಕ್ತರಿಗೆ ಇದೊಂದು ಬಿಗ್ ಶಾಕ್ ನೀಡಿದಂತೆ ಆಗಿದೆ.

Leave A Reply

Your email address will not be published.