ಶಾಲೆಯಲ್ಲಿ ಬಿಸಿಯೂಟ ತಯಾರಿಸುವಾಗ ಸಿಲಿಂಡರ್ ಸ್ಫೋಟ | ತಪ್ಪಿತು ಭಾರೀ ದೊಡ್ಡ ಅನಾಹುತ

ಶಾಲಾ ಮಕ್ಕಳಿಗೆ ಬಿಸಿಯೂಟ ತಯಾರಿಸುವ ಸಂದರ್ಭದಲ್ಲಿ ಶಾಲೆಯಲ್ಲಿಯೇ ಸಿಲಿಂಡರ್ ಸ್ಫೋಟಗೊಂಡಿದ್ದು, ಪ್ರಾಣ ಹಾನಿ ಯಾವುದೇ ಸಂಭವಿಸಿಲ್ಲ. ಆದರೆ ಆಹಾರ ಧಾನ್ಯಗಳು ಸುಟ್ಟು ಭಸ್ಮವಾಗಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್​ನ ವಿವೇಕಾನಂದ ನಗರದಲ್ಲಿ ತಾಲೂಕಿನ ಗೋಡಚಿನಮಲ್ಕಿ ಗ್ರಾಮದಿಂದ ಸ್ಥಳಾಂತರಗೊಂಡಿರುವ ಡಾ ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಈ ಘಟನೆಯು ನಡೆದಿದೆ.

ಸಿಲಿಂಡರ್‌ನ ರೆಗ್ಯುಲೇಟರ್ ಸಡಿಲಿಕೆ ಮತ್ತು ಪೈಪ್ ಲೀಕೇಜ್​ ಆಗಿರುವುದೇ ಸ್ಫೋಟಕ್ಕೆ ಕಾರಣ.

ಅಕ್ಕಿ, ಬೇಳೆ, ಹಾಲಿನ ಪೌಡರ್, ಮಕ್ಕಳಿಗೆ ನೀಡಲು ಮಾಡಲಾದ ದೋಸೆ ಹಿಟ್ಟು ಸೇರಿದಂತೆ ಪಾತ್ರೆಗಳು ಒಡೆದು ಹೋಗಿದೆ.
ಬಿಸಿಯೂಟ ಕೋಣೆಯಲ್ಲಿ ಅಡುಗೆ ಮಾಡುತ್ತಿರುವಾಗ ಸಿಲಿಂಡರ್​ ಸ್ಫೋಟವಾಗಿ ಕೋಣೆಯ ಬಾಗಿಲು ಸುಟ್ಟು ಹೋಗಿದೆ. ಕೊಠಡಿಯೊಳಗಡೆ ಇರುವ ಬಿಸಿಯೂಟದ ಆಹಾರ ಪದಾರ್ಥಗಳು, ಪರಿಕರಗಳು ಸುಟ್ಟು ಕರಕಗಿದ್ದು, ಅದೃಷ್ಟವಶಾತ್ ಯಾವುದೇ ರೀತಿಯ ಜೀವಹಾನಿ ಸಂಭವಿಸಿಲ್ಲ. ಈ ದುರ್ಘಟನೆಯು ಗೋಕಾಕ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿರುವ ವೇಳೆ ಸಿಲಿಂಡರ್​ನಿಂದ ಭಾರಿ ಶಬ್ದ ಬಂದಿದೆ. ತಕ್ಷಣವೇ ಅಡುಗೆಯ ಸಿಬ್ಬಂದಿ ಕೋಣೆಯಿಂದ ಹೊರಗೆ ಓಡಿ ಬಂದು ಜೀವ ಅಪಾಯದಿಂದ ಪಾರಾಗಿದ್ದಾರೆ, ಬಳಿಕ ಕೋಣೆಯ ತುಂಬೆಲ್ಲ ಬೆಂಕಿ ಆವರಿಸಿ ಕಿಟಕಿ -ಬಾಗಿಲುಗಳು ಸುಟ್ಟು ಹೋಗಿವೆ, ಬಳಿಕ ಶಿಕ್ಷಕರ ಮಾಹಿತಿ ಮೇರೆಗೆ ಸ್ಥಳ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದರು.

Leave A Reply

Your email address will not be published.