PFI ಸರ್ವೆ ನಂತರ ಮುಖಂಡರ ಆಸ್ತಿ ಮುಟ್ಟುಗೋಲು : ಗೃಹ ಸಚಿವ ಅರಗ ಜ್ಞಾನೇಂದ್ರ ಸುಳಿವು

ಮಂಗಳೂರು : ಕೇಂದ್ರ ಸರಕಾರವು ದೇಶದಲ್ಲಿ ಪ್ಯಾಪುಲರ್ ಫ್ರೆಂಟ್ ಆಫ್ ಇಂಡಿಯಾ (PFI) 5 ವರ್ಷಗಳ ಕಾಲ ನೀಷೇಧಿಸಿದ ಬೆನ್ನಲ್ಲೇ ರಾಜ್ಯಾದ್ಯಂತ ಹಪವಾರು ಪಿಎಫ್ ಐ ಮುಖಂಡರ ಮನೆಗಳ ಪೊಲೀಸರು ದಾಳಿ ಮಾಡಿ 40 ಕ್ಕೂ ಹೆಚ್ಚು ಮುಖಂಡರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಗೃಹ ಸಚಿವ ಅರಗ ಜ್ಞಾನೇಂದ್ರ ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, PFI ಸರ್ವೆ ಮುಗಿದ ಕೂಡಲೇ ವಶಕ್ಕೆ ಪಡೆದುಕೊಂಡ ಮುಖಂಡರ ಆಸ್ತಿ ಮುಟ್ಟುಗೋಲು ಮಾಡಲಾಗುತ್ತದೆ ಎಂದು ಸುಳಿವೊಂದನ್ನು ನೀಡಿದ್ದಾರೆ.

ಕೆಲವು ಸಾಮಾನ್ಯ ಕಾರ್ಯಕರ್ತರ ಖಾತೆಯಲ್ಲಿ ಲಕ್ಷಾಂತರ ರೂ ಹಣ ಪತ್ತೆಯಾಗಿದೆ. ಇದು ದೇಶ, ವಿದೇಶಗಳಿಂದ ಬಂದಿರುವ ದೇಣಿಗೆ ಹಣವಾಗಿದ್ದು, ಯುಪಿಐ ಕೋಡ್, ಕ್ಯು ಆರ್ ಕೋಡ್ ಮೂಲಕ ಹಣವನ್ನು ಹಲವು ಬಾರಿ ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪಿಎಫ್ ಐ(Popular Front of India – PFI) ನಿಷೇಧಗೊಳಿಸಿದ ಕೇಂದ್ರ ಸರ್ಕಾರ ಪಿಎಫ್‌ಐ ನಅಧಿಕೃತ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಈ ಖಾತೆಗಳಲ್ಲಿ ಕೋಟ್ಯಾಂತರ ರೂ ಹಣವಿದ್ದು, ಇದನ್ನು ಹೊರತುಪಡಿಸಿ ಕೋಟ್ಯಾಂತರ ರೂ ಹಣ ಸಂಘಟನೆ ಬಳಿಯಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಅದರ ಅಂಗಸಂಸ್ಥೆಗಳ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿಯಲ್ಲಿ ಐದು ವರ್ಷಗಳ ನಿಷೇಧದ ನಂತರ, ಗೃಹ ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ಮುಖ್ಯಸ್ಥರಿಗೆ ಸಂಘಟನೆಯ ಇತರ ಕಚೇರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮತ್ತು ಹಣವನ್ನು ವಶಪಡಿಸಿಕೊಳ್ಳಲು ಹೇಳಿದೆ.

ಈ ನಡುವೆ ಹಿರಿಯ ಸರ್ಕಾರಿ ಅಧಿಕಾರಿಗಳ ಪ್ರಕಾರ, ಪಿಎಫ್‌ಐ ಸದಸ್ಯರು ಸಂಘಟನೆಯಿಂದ ತಮ್ಮ ಬೇರ್ಪಡುವಿಕೆಯನ್ನು ಘೋಷಿಸಬೇಕಾಗುತ್ತದೆ, ಆದರೆ, ಅವರು ಮುಂದುವರಿದರೆ, ಅವರು ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡವನ್ನು ಎದುರಿಸಬೇಕಾಗುತ್ತದೆ.

ಪಿಎಫ್‌ಐ ನಿಷೇಧ ಆದೇಶ ಹೊರಬಿದ್ದ ನಂತರ ಮಂಗಳೂರಿನ 12 ಪಿಎಫ್‌ಐ ಕಚೇರಿಗಳಿಗೆ ಬೀಗ ಹಾಕಲಾಗಿದೆ. ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಮಂಗಳೂರು, ಪಣಂಬೂರು, ಸುರತ್ಕಲ್, ಬಿಜೈ, ಉಳ್ಳಾಲ, ಕೋಣಾಜೆ ಸೇರಿದಂತೆ ಹಲವು ಕಡೆ ತಡರಾತ್ರಿವರೆಗೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

Leave A Reply

Your email address will not be published.