ರಾಜ್ಯ ಸರಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ

ಚರ್ಮ ಗಂಟು ರೋಗದಿಂದ ಜಾನುವಾರು ಮೃತಪಟ್ಟರೆ ಪರಿಹಾರ ಧನ ನೀಡಲು ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಆದೇಶ ಹೊರಡಿಸಿದೆ. ಅಲ್ಲದೇ ಪರಿಹಾರಧನ ವಿತರಣೆಗಾಗಿ 2 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.

ಚರ್ಮಗಂಟು ರೋಗದಿಂದ ಮರಣಿಸುವ ಪ್ರತಿ ಕರುವಿಗೆ 5 ಸಾವಿರ ರೂಪಾಯಿ, ಹಸುವಿಗೆ 20 ಸಾವಿರ ರೂಪಾಯಿ, ಎತ್ತು ಮೃತಪಟ್ಟರೆ 30 ಸಾವಿರ ರೂಪಾಯಿ ಪರಿಹಾರ ಧನ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಅನುದಾನವನ್ನು ನಿಯಮಾನುಸಾರ ಯಾವ ಉದ್ದೇಶಕ್ಕಾಗಿ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕಾಗಿ ಉಪಯೋಗಿಸಿಕೊಂಡು ಕಡ್ಡಾಯವಾಗಿ ಹಣಬಳಕೆ ಪ್ರಮಾಣ ಪತ್ರವನ್ನು ಸಲ್ಲಿಸಬೇಕು ಎಂದು ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ತಿಳಿಸಿದೆ.

Leave A Reply

Your email address will not be published.