ಎಲ್ಲಾ ಧರ್ಮದವರಿಗೂ ಜನಸಂಖ್ಯಾ ನೀತಿ ಕಡ್ಡಾಯ ? RSS ಮುಖಂಡರು ಹೇಳಿದ್ದೇನು ?

ಇನ್ನಾದರೂ ಭಾರತದ ಜನಸಂಖ್ಯೆ ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ದೇಶ ಒಡೆಯುವ ಭೀತಿ ಹೆಚ್ಚಾಗಲಿದೆ ಎಂದು ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಇಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ. ದೇಶದ ಸಮುದಾಯದ ಜನರಿಗೂ ಈ ನೀತಿ ಕಡ್ಡಾಯ ಮಾಡಬೇಕು ಎಂದವರು ಕರೆ ನೀಡಿದ್ದಾರೆ.

ಪ್ರತಿ ದೇಶದ ಜನಸಂಖ್ಯೆ ಹೆಚ್ಚಾದಷ್ಟೂ ಹೊರೆ ಹೆಚ್ಚಾಗುತ್ತದೆ. ಸಂಪನ್ಮೂಲ ಇದ್ದಷ್ಟೇ ಕಾಲು ಚಾಚಬೇಕು, ಜನಸಂಖ್ಯೆಯನ್ನು ಸರಿಯಾಗಿ ಬಳಸಿಕೊಂಡು ಸಂಪನ್ಮೂಲ ರೂಪಿಸಬೇಕು. 50 ವರ್ಷಗಳ ನಂತರ ಎಷ್ಟು ಜನರಿಗೆ ಆಹಾರ ಮತ್ತು ಸೌಕರ್ಯ ಒದಗಿಸಬಹುದು ಎಂಬುದನ್ನು ನಾವು ಗುರಿ ಹಾಕಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ಜನಸಂಖ್ಯೆಗೆ ಸಂಪನ್ಮೂಲಗಳು ಬೇಕಾಗುತ್ತವೆ. ಸಂಪನ್ಮೂಲಗಳನ್ನು ನಿರ್ಮಿಸದೆ ಜನಸಂಖ್ಯೆ ಬೆಳೆದರೆ ಅದು ಹೊರೆಯಾಗುತ್ತದೆ ಎಂದ ಅವರು, ಸಮಗ್ರ ಜನಸಂಖ್ಯಾ ನೀತಿಯನ್ನು ತರಬೇಕು. ಅದು ಎಲ್ಲರಿಗೂ ಸಮಾನವಾಗಿ ಅನ್ವಯಿಸಬೇಕು. ಆಗ ಮಾತ್ರ ಜನಸಂಖ್ಯೆ ನಿಯಂತ್ರಣದ ಕ್ರಮಗಳು ಫಲ ನೀಡಲು ಸಾಧ್ಯ ಎಂದರು.

ಆರ್‌ಸ್ಎಸ್ ಸಂಸ್ಥಾಪನಾ ದಿನದ ನಿಮಿತ್ತ ನಾಗುರದಲ್ಲಿ ನ ವಿಜಯದಶಮಿ ಹಬ್ಬದ ಉತ್ಸವದಲ್ಲಿ ಅವರು ಮಾತನಾಡಿದರ ದೇಶದ ಜನಸಂಖ್ಯೆ ನಿಯಂತ್ರಣದ ಜತೆಗೆ ಧಾರ್ಮಿಕ ಆಧಾರದ ಮೇಲೆ ಜನಸಂಖ್ಯೆಯ ಸಮತೋಲನವೂ ಪ್ರಾಮುಖ್ಯತೆಯ ವಿಷಯವಾಗಿದೆ. ಅದನ್ನು ನಿರ್ಲಕ್ಷಿಸಲಾಗುವುದಿಲ್ಲ ಎಂದು ಮೋಹನ್ ಭಾಗವತ್ ಹೇಳಿದರು.

ಇದೇ ವೇಳೆ, ಆಯುಧ ಪೂಜೆಗೆ ಅತಿಥಿಯಾಗಿ ಆಗಮಿಸಿದ್ದ ಮಹಿಳಾ ಪರ್ವತಾರೋಹಿ ಸಂತೋಷ ಯಾದವ್ ಅವರನ್ನು ಮೋಹನ ಭಾಗ್ವತ್ ಶ್ಲಾಘಿಸಿದರು. ಆರ್‌ಎಸ್‌ಎಸ್ ಸಂಪ್ರದಾಯದಲ್ಲಿ ಬದಲಾವಣೆ ಮಾಡಿಕೊಂಡು, ಅಲ್ಲಿ ಭಾಗವಹಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಸಂತೋಷ ಯಾದವ್.ಮಹಿಳೆಯರಿಗೆ ಎಲ್ಲ ಸ್ಥಳಗಳಲ್ಲಿ ಸಮಾನ ಹಕ್ಕು ಸಿಗಬೇಕು. ನಿರ್ಧಾರಗಳನ್ನು ತಳೆಯುವ ಹಕ್ಕು ಅವರಿಗಿದೆ. ನಾಲ್ಕು ಗೋಡೆಗಳ ಮಧ್ಯೆ ಅವರನ್ನು ನಿರ್ಬಂಧಿಸುವುದು ಸರಿಯಲ್ಲ. ಸ್ತ್ರೀಯರು ಮಾಡಬಹುದಾದ ಎಲ್ಲಾ ಕೆಲಸಗಳನ್ನು ಪುರುಷ ಮಾಡಲು ಸಾಧ್ಯವಿಲ್ಲ ಎಂದರು ಮೋಹನ್ ಭಾಗ್ವತ್ ಇದೇ ವೇಳೆ ಪ್ರತಿಪಾದಿಸಿದರು.

Leave A Reply

Your email address will not be published.